ಕನ್ನಡ ವಾರ್ತೆಗಳು

ಸುಬ್ರಹ್ಮಣ್ಯೇಶ್ವರ ಸ್ವಾಮಿ ಸೃಷ್ಟಿ ಪ್ರಯುಕ್ತ ಮೈಸೂರ್ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾರ್ಗ ಬದಲಾವಣೆ

Pinterest LinkedIn Tumblr

highway_benglore_mysore

ಮೈಸೂರು, ನ. 27: ನಗರದ ಹೊರವಲಯದಲ್ಲಿರುವ ಸಿದ್ದಲಿಂಗಪುರದಲ್ಲಿ ಗುರುವಾರ ಸುಬ್ರಹ್ಮಣ್ಯೇಶ್ವರ ಸ್ವಾಮಿ ಸೃಷ್ಟಿ ನಡೆಯಲಿರುವ ಕಾರಣ ಮೈಸೂರಿನಿಂದ ಬೆಂಗಳೂರಿಗೆ ತೆರಳುವ ಮಾರ್ಗವನ್ನು ಬದಲಾಯಿಸಲಾಗಿದೆ. ಈ ಕುರಿತು ಮೈಸೂರು ಪೊಲೀಸ್ ಆಯುಕ್ತರ ಕಚೇರಿಯಿಂದ ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಲಾಗಿದೆ. ಮೈಸೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳು ಮೈಸೂರು-ಬೆಂಗಳೂರು ಹೆದ್ದಾರಿ ಮೇಲೆ ಟೋಲ್ ಗೇಟ್ ಹತ್ತಿರ ಎಡಕ್ಕೆ ತಿರುಗಬೇಕು. ವರ್ತುಲ ರಸ್ತೆಯಲ್ಲಿ ಮುಂದುವರಿದು ರಾಯಲ್ ಇನ್ ಜಂಕ್ಷನ್‌ವರೆಗೆ ಮುಂದುವರಿಯಬೇಕು.

ನಂತರ ಬಲಕ್ಕೆ ತಿರುಗಿ ಮುಂದುವರಿದು ಕೆಆರ್‌ಎಸ್ ರಸ್ತೆಯಲ್ಲಿ ಪಂಪ್ ಹೌಸ್‌ವರೆಗೂ ಮುಂದುವರಿಯಬೇಕು. ಇಲ್ಲಿಂದ ಬಲಕ್ಕೆ ತಿರುಗಿ ಪಶ್ಚಿಮ ವಾಹಿನಿಯವರೆಗೂ ಮುಂದುವರಿಯಬೇಕು. ಅಲ್ಲಿ ಎಡಕ್ಕೆ ತಿರುಗಿದರೆ ಮೈಸೂರು-ಬೆಂಗಳೂರು ಹೆದ್ದಾರಿ ಸಿಗುತ್ತದೆ. ಈ ಆದೇಶವು ಬುಧವಾರ ಮಧ್ಯರಾತ್ರಿಯಿಂದ ಜಾರಿಗೆ ಬರಲಿದ್ದು, ಗುರುವಾರ ರಾತ್ರಿ 10 ಗಂಟೆಯವರೆಗೂ ಮುಂದುವರಿಯಲಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ಸಿದ್ಧಲಿಂಗಪುರದ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನಕ್ಕೆ ಗುರುವಾರ ಸುಮಾರು 15-20 ಸಾವಿರ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಆದ್ದರಿಂದ ಭಕ್ತರಿಗೆ ಹಾಗೂ ವಾಹನಗಳ ಸಂಚಾರಕ್ಕೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಲಾಗಿದೆ

Write A Comment