ಕರ್ನಾಟಕ

ಜೆಡಿಎಸ್ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂದ ಸಿಎಂ !

Pinterest LinkedIn Tumblr

254331-siddarmahiah-hd-kumaraswamy-300

ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಅಸ್ಥಿರಗೊಳಿಸಲು ಜೆಡಿಎಸ್ ನಿಂದ ಎಂದಿಗೂ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜೆಡಿಎಸ್ ವಾಮಮಾರ್ಗ ಅನುಸರಿಸಿದರೆ  ಸರ್ಕಾರವನ್ನು ಕೆಳಗಿಸಬಹುದು ಎಂದು ಜೆಡಿಎಸ್ ನ ನಾಯಕರು ತಿಳಿದಿದ್ದಾರೆ. ಆದರೆ  ಅದು ಎಂದಿಗೂ ಸಾಧ್ಯವಿಲ್ಲದ ಮಾತು . ಅಷ್ಟೇ ಅಲ್ಲ ,  ಜೆಡಿಎಸ್ ಎಂದಿಗೂ ಅಧಿಕಾರ ಹಿಡಿಯುವುದಕ್ಕೂ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ನಮ್ಮ  ಸರ್ಕಾರ ಜನರಿಂದ ಆಯ್ಕೆಯಾಗಿರುವ ಸರ್ಕಾರವಾಗಿದ್ದು  ಇದನ್ನು ಅಷ್ಟು ಸುಲಭವಾಗಿ ಕೆಳಗಿಸಲು ಸಾಧ್ಯವಿಲ್ಲ. ಪ್ರತಿಪಕ್ಷಗಳು ಇತ್ತೀಚೆಗೆ ಏಕೋ ಏನೋ ಭೂಗಳ್ಳರ ಬಗ್ಗೆ ಮಾತನಾಡಲು ಆರಂಭಿಸಿದ್ದು ಪ್ರತಿಪಕ್ಷ ನಾಯಕರು ಸದನದ ಒಳಗೆ ಒತ್ತುವರಿ ತೆರವು ಮಾಡಿ ಎನ್ನುತ್ತಾರೆ. ಹೊರಗೆ ಬಂದು ಒತ್ತುವರಿ ಬೇಡ ಎಂದು ಸರ್ಕಾರದ ವಿರುದ್ಧ ಮಾತನಾಡುವ ಮೂಲಕ ಇಬ್ಬಗೆ ನೀತಿ ಅನುಸರಿಸುತ್ತಿದ್ದಾರೆ ಎಂದು ಕಿಡಿ ಕಾರಿದರು.

ಜೆಡಿಎಸ್ ಗೆ ಅಧಿಕಾರ ಹಿಡಿಯಲು ಸಾಧ್ಯವಿಲ್ಲದಿರಬಹುದು. ಆದರೆ, ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಇಳಿಸುವ ಶಕ್ತಿಯಿದೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಮಾಧ್ಯಮ ಸಂವಾದದಲ್ಲಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Write A Comment