ಕರ್ನಾಟಕ

ಕಾಂಗ್ರೆಸ್ ಶಾಸಕ ಅನಿಲ್ ಲಾಡ್‌ಗೆ ಷರತ್ತುಬದ್ಧ ಜಾಮೀನು

Pinterest LinkedIn Tumblr

anilladಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ಬಳ್ಳಾರಿ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಅವರಿಗೆ ಸೋಮವಾರ ಸಿಬಿಐ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ಲಾಡ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಇಬ್ಬರ ವೈಯಕ್ತಿಕ ಶ್ಯೂರಿಟಿ ಹಾಗೂ ತಲಾ 10 ಲಕ್ಷ ರುಪಾಯಿ ಬಾಂಡ್ ಮೇಲೆ ಜಾಮೀನು ಮಂಜೂರು ಮಾಡಿದೆ.

ತನಿಖೆಗೆ ಸಹಕರಿಸುವಂತೆ ಹಾಗೂ ಪ್ರತಿ ಶನಿವಾರ ಸಿಬಿಐ ಕಚೇರಿಗೆ ಆಗಮಿಸಿ ಸಹಿ ಹಾಕುವಂತೆ ಅನಿಲ್ ಲಾಡ್ ಅವರಿಗೆ ಕೋರ್ಟ್ ಸೂಚಿಸಿದೆ.

2010ರಲ್ಲಿ ಅನಿಲ್ ಲಾಡ್ ಮಲ್ಲಿಕಾರ್ಜುನ್ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್ ಗೆ 15 ಸಾವಿರ ಮೆಟ್ರಿಕ್ ಟನ್ ಕಬ್ಬಿಣದ ಅದಿರು ರಫ್ತು ಮಾಡಿದ್ದಾರೆ ಎಂಬ ಆರೋಪದ ಮೇಲೆ ಸಿಬಿಐ ತನಿಖಾಧಿಕಾರಿಗಳು ಬಂಧಿಸಿದ್ದರು.

Write A Comment