ಕನ್ನಡ ವಾರ್ತೆಗಳು

ವಾಹನ ಕಳವು ಪ್ರಕರಣ : ಪ್ರಮುಖ ಆರೋಪಿಯ ಬಂಧನ

Pinterest LinkedIn Tumblr

vicale_theft_accused

ಕಾಸರಗೋಡು, ಡಿ.09 : ಹಲವು ವಾಹನ ಕಳವು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿಯೋರ್ವನನ್ನು ಕಾಸರಗೋಡು ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ನಡೆದಿದೆ.

ಬಂಧಿತನನ್ನು ತೆಕ್ಕಿಲ್ ನಂಬಾಡಿಪಳ್ಳದ ಅಹ್ಮದ್ ರಮ್ಸಾನ್ (22) ಎಂದು ಗುರುತಿಸಲಾಗಿದೆ. ಈತ ಡಿ.6ರಂದು ರಾತ್ರಿ ಚಟ್ಟಂಚಾಲ್ ಬಳಿಯಿಂದ ಬೈಕ್ ಕಳವುಗೈದ ಪ್ರಕರಣದ ಆರೋಪಿಯಾಗಿದ್ದು,ಈ ಕುರಿತು ಲಭಿಸಿದ ದೂರಿನಂತೆ ಆರೋಪಿಯನ್ನು ವಶಕ್ಕೆ ತೆಗೆದು ವಿಚಾರಣೆ ನಡೆಸಿದಾಗ ಈತ ಕಾಸರಗೋಡು, ಬೇಕಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾರು ಕಳ್ಳತನ ಸೇರಿದಂತೆ ಇತರ ಹಲವು ವಾಹನ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ.

ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Write A Comment