ಕರ್ನಾಟಕ

ನಾಗಮಂಗಲ : ಕೆರೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Pinterest LinkedIn Tumblr

suic

ನಾಗಮಂಗಲ, ಡಿ.15-ಕೆರೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಾಳಿಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕುಣಿಗಲ್ ತಾಲೂಕಿನ ರಾಗಿಹಳ್ಳಿ ಮೂಲದ ತಂದೆ ರಾಮಕೃಷ್ಣ (63), ತಾಯಿ ನಾಗಮ್ಮ (55) ಹಾಗೂ ಮಗ ಆನಂದ್ (30) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ನಿನ್ನೆ ಸಂಜೆ ತಂದೆ-ತಾಯಿ ಹಾಗೂ ಮಗ ಈ ಮೂವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಬೆಳಗ್ಗೆ ಕೆರೆಯಲ್ಲಿ ಶವಗಳು ತೇಲುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಕೂಡಲೇ ಬೆಳ್ಳೂರು ಠಾಣೆ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪಂಚನಾಮೆ ನಡೆಸಿ ಮೃತ ದೇಹಗಳನ್ನು ಶವಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಬೆಳ್ಳೂರು ಠಾಣೆ ಇನ್ಸ್‌ಪೆಕ್ಟರ್ ಬಾಲು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Write A Comment