ಕನ್ನಡ ವಾರ್ತೆಗಳು

ಉಡುಪಿ ಪೊಲೀಸರಿಗೆ ಸಿಕ್ಕಿಬಿದ್ದ ಜನರೇಟರ್ ಕದಿಯುವ ಕಳ್ಳ..!

Pinterest LinkedIn Tumblr

ಉಡುಪಿ:  ಗಂಗೊಳ್ಳಿ ಹಾಗೂ ಬೈಂದೂರು ಪೊಲೀಸ್ ಠಾಣೆ ಸರಹದ್ದಿನಲ್ಲಿ ರಾತ್ರಿ ವೇಳೆಗಳಲ್ಲಿ ಜನರೇಟರ್ ಕಳವು ಮಾಡಿದ್ದ ಆರೋಪಿಯನ್ನು ಡಿಸಿ‌ಐಬಿ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಟಿಪ್ಪುನಗರ ವಾಸಿ ಜಾವೇದ್ ಮಹಮ್ಮದ್ ಸಯ್ಯದ್ (38) ಎಂಬಾತನನ್ನು ಪೊಲೀಸರು ಬಂಧಿಸಿ ಆತನಿಂದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Udp_DCIB police Arrest_Jenerater Thaeif

ತಾಲೂಕಿನ ವಿವಿದೆಡೆಗಳಲ್ಲಿ ರಾತ್ರಿ ವೇಳೆ ಜನರೇಟರ್ ಕಳವಾಗಿದ್ದ ಬಗ್ಗೆ ಆಯಾಯ ಅಂಗಡಿ ಮಾಲೀಕರು ದೂರು ನೀಡಿದ್ದರು. ಈ ದೂರಿನ ಅನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು ಕದ್ದ ಮಾಲು ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯಿಂದ ಮೂರು ಜನರೇಟರ್ ಹಾಗೂ ಪಿಕ್‌ಅಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ, ಇವುಗಳೆಲ್ಲದರ ಅಂದಾಜು ಮೌಲ್ಯ 5,97,000/- ರೂಪಾಯಿ ಎನ್ನಲಾಗಿದೆ.

ಕಾರ್ಯಾಚರಣೆ ತಂಡ: ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ ಅಣ್ಣಾಮಲೈ ಅವರ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಂತೋಷ ಕುಮಾರ್ ಮತ್ತು ಕುಂದಾಪುರ ಡಿವೈಎಸ್ಪಿ ಮಂಜುನಾಥ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ, ಡಿಸಿಐಬಿ ಇನ್ಸ್‌ಪೆಕ್ಟರ್ ಟಿ.ಆರ್.ಜೈಶಂಕರ್ ಹಾಗೂ ಸಿಬ್ಬಂದಿಗಳಾದ ಎ.ಎಸ್.ಐ. ರೊಸಾರಿಯೊ ಡಿ’ಸೋಜಾ, ರವಿಚಂದ್ರ, ಚಂದ್ರ ಶೆಟ್ಟಿ, ರಾಮು ಹೆಗ್ಡೆ, ಸಂತೋಷ ಕುಂದರ್, ಸುರೇಶ ಕೆ, ರಾಘವೇಂದ್ರ ಉಪ್ಪುಂದ , ಶಿವಾನಂದ ಪೂಜಾರಿ, ದಯಾನಂದ ಪ್ರಭು, ರಾಜ್ ಕುಮಾರ್ ಬೈಂದೂರು ಮತ್ತು ವಾಹನ ಚಾಲಕರಾದ ನವೀನ್‌ಚಂದ್ರ ಹಾಗೂ ರಾಘವೇಂದ್ರ ಅವರು ಪಾಲ್ಗೊಂಡಿದ್ದರು.

Write A Comment