ಕನ್ನಡ ವಾರ್ತೆಗಳು

ಮೀನುಗಾರಿಕಾ ಕ್ಷೇತ್ರದಲ್ಲಿ ಬಾಹ್ಯಾಕಾಶ ತಂತ್ರಜ್ಞಾನ ಬಳಕೆ: ವಿಚಾರಸಂಕಿರಣ

Pinterest LinkedIn Tumblr

ಮ೦ಗಳೂರು ಜ.೦2: ಮೀನುಗಾರಿಕಾ ಕ್ಷೇತ್ರದಲ್ಲಿ ಬಾಹ್ಯಾಕಾಶ ತಂತ್ರಜ್ಞಾನ ಮತ್ತು ಉಪಕರಣಗಳ ಬಳಕೆ ಕುರಿತು ಎರಡು ದಿನಗಳ ವಿಚಾರಸಂಕಿರಣ ಜ.4 ಮತ್ತು 5 ರಂದು ಮಂಗಳೂರಿನಲ್ಲಿ ನಡೆಯಲಿದೆ.

ನಗರದ ಮೋತಿಮಹಲ್ ಹೋಟೆಲ್ ಸಭಾಂಗಣದಲ್ಲಿ ನಡೆಯುವ ವಿಚಾರಸಂಕಿರಣವನ್ನು ಜ.4ರಂದು ಬೆಳಿಗ್ಗೆ 10 ಕ್ಕೆ ಕೇಂದ್ರ ಸರಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ರಾಧಾ ಮೋಹನ್ ಸಿಂಗ್ ಉದ್ಘಾಟಿಸುವರು.

ರಾಜ್ಯ ಸರಕಾರದ ಮೀನುಗಾರಿಕೆ ಮತ್ತು ಕ್ರೀಡೆ, ಯುವ ಸಬಲೀಕರಣ ಸಚಿವ ಕೆ. ಅಭಯಚಂದ್ರ , ಕೇಂದ್ರ ಸರಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಅಶೋಕ್ ಕುಮಾರ್ ಅಂಗುರಾನ ಮತ್ತು ಜಂಟಿ ಕಾರ್ಯದರ್ಶಿ ಆದಿತ್ಯ ಕುಮಾರ್ ಜೋಶಿ ಹಾಗೂ ಕರ್ನಾಟಕ ಸರಕಾರದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎನ್.ಎಸ್. ಚೆನ್ನಪ್ಪ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Write A Comment