ಚಿಕ್ಕಮಗಳೂರು: ಮಲೆನಾಡಿನ ಗಾಂಧಿ ಎಂದೇ ಖ್ಯಾತರಾಗಿದ್ದ ಮಾಜಿ ಶಿಕ್ಷಣ ಸಚಿವ ಗೋವಿಂದೇಗೌಡ (90) ಅವರು ಇಂದು ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಜಿಲ್ಲೆಯ ಕೊಪ್ಪ ತಾಲೂಕಿನ ಮಣಿಪುರ ಎಸ್ಟೇಟ್ನಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮಲೆನಾಡಿನ ಗಾಂಧಿ ಎಂದೇ ಖ್ಯಾತರಾಗಿದ್ದ ಗೋವಿಂದೇಗೌಡ ಅವರು ಕಳೆದ ಒಂದೂವರೆ ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಇವರು ಐವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಶಿಕ್ಷಣ ಸಚಿವರಾಗಿದ್ದ ಗೋವಿಂದೇಗೌಡರು 1 ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಭರ್ತಿ ಮಾಡಿದ್ದರು. ಯಾವುದೇ ಭ್ರಷ್ಟಾಚಾರ ಇಲ್ಲದೆ ನೇಮಕಾತಿ ಮಾಡಿದ ಹಿರಿಮೆ ಇವರದ್ದಾಗಿದೆ.