ಗಲ್ಫ್

ಅತ್ಯಾಚಾರ ಪ್ರಕರಣ: ಕೋರ್ಟ್ ಗೆ ನಿತ್ಯಾನಂದ ಹಾಜರು

Pinterest LinkedIn Tumblr

nithyanandaರಾಮನಗರ: ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಪ್ರಕರಣ ಎದುರಿಸುತ್ತಿರುವ ಬಿಡದಿಯ ಧ್ಯಾನಪೀಠದ ನಿತ್ಯಾನಂದ ವಿಚಾರಣೆಗಾಗಿ ಗುರುವಾರ ರಾಮನಗರ ಕೋರ್ಟ್ ಗೆ ಹಾಜರಾಗಿದ್ದಾರೆ.

ರಾಮನಗರ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ನಾಗಶ್ರೀ ಮುಂದೆ ನಿತ್ಯಾನಂದ ಮತ್ತು ಆತನ ಐವರು ಶಿಷ್ಯರು ಹಾಜರಾಗಿದ್ದಾರೆ.

ನಿತ್ಯಾನಂದ ಪರ ವಕೀಲರು ವಾದ ಮಂಡಿಸುತ್ತಿದ್ದಾರೆ. ಕಳೆದ ಡಿಸೆಂಬರ್ 19ರಂದು ವಿಚಾರಣೆಗೆ ಮುಂದೂಡಲಾಗಿತ್ತು. ಇಂದು ಮತ್ತೆ ಕೋರ್ಟ್ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

Write A Comment