ಕನ್ನಡ ವಾರ್ತೆಗಳು

ಬಂಟರ ಸಂಘ, ಜೋಗೇಶ್ವರಿ – ದಹಿಸರ್ ಸಮಿತಿಯ ದಶಮಾನೋತ್ಸವ.

Pinterest LinkedIn Tumblr

Mumbai_bunts_photo_1

ವರದಿ : ಈಶ್ವರ ಎಂ. ಐಲ್/ಚಿತ್ರ,: ದಿನೇಶ್ ಕುಲಾಲ್
ಮುಂಬಯಿ : ಬಂಟರ ಸಂಘ, ಮುಂಬಯಿ ಇದರ ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿಯ ದಶಮಾನೋತ್ಸವ ಸಮಾರಂಭವು ಕಾಂದಿವಲಿ ಪೂರ್ವ ಅವೆನ್ಯೂ ಹೋಟೇಲು ಸಭಾಂಗಣದಲ್ಲಿ ಜ. 10 ರಂದು ಜರಗಿತು.

ಬಂಟರ ಸಂಘ, ಮುಂಬಯಿ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿಯವರು ದೀಪ ಬೆಳಗಿಸಿ ಸಮಾರಂಭಕ್ಕೆ ಚಾಲನೆಯಿತ್ತು ಮಾತನಾಡುತ್ತಾ ಸಮಾಜ ಬಾಂಧವರ ಒಳಿತಿಗಾಗಿ ಸಂಘ ಸದಾ ಕಾರ್ಯನಿರತವಾಗಿದೆ. ಸಮಾಜದಲ್ಲಿ ದುಂದುವೆಚ್ಚದ ಮದುವೆ, ಸಮಾರಂಭಗಳ ನಡೆಯುತ್ತಿದ್ದು ಇದಕ್ಕೆ ಕಡಿವಾಣ ಅಗತ್ಯ. ಸಮಾಜದ ಮಕ್ಕಳ ಶಿಕ್ಷಣದ ಬಗ್ಗೆ ಗಮನ ಹರಿಸೋಣ ಎನ್ನುತ್ತಾ ಈ ಪ್ರಾದೇಶಿಕ ಸಮಿತಿಯ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Mumbai_bunts_photo_2 Mumbai_bunts_photo_3 Mumbai_bunts_photo_4 Mumbai_bunts_photo_5 Mumbai_bunts_photo_6 Mumbai_bunts_photo_7

ಸಂಸದ ಗೋಪಾಲ ಶೆಟ್ಟಿ, ಐಕಳ ಹರೀಶ್ ಶೆಟ್ಟಿಯವರು ಗೌರವ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದರು. ಉದ್ಯಮಿಗಳಾದ ಪ್ರಸಾದ್ ಶೆಟ್ಟಿ, ಕೆ. ಕೆ. ಶೆಟ್ಟಿ, ಕೆ. ಎಂ. ಶೆಟ್ಟಿ, ಕೃಷ್ಣ ವೈ ಶೆಟ್ಟಿ, ರಘುರಾಮ್ ಶೆಟ್ಟಿ, ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜೆ, ಶೆಟ್ಟಿ, ಉಪಾಧ್ಯಕ್ಷ ಪ್ರಭಾಕರ ಶೆಟ್ಟಿ, ಕಾರ್ಯದರ್ಶಿ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಸಿಎ ಐ ಆರ್ ಶೆಟ್ಟಿ, ಕಿಶೋರ್ ಕುಮಾರ್, ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ವಿಜಯ್ ಕೆ. ಭಂಡಾರಿ, ಉಪ ಕಾರ್ಯಾಧ್ಯಕ್ಷ ರವೀಂದ್ರ ಶೆಟ್ಟಿ, ಮನೋಹರ್ ಶೆಟ್ಟಿ, ನಿತ್ಯಾನಂದ ಹೆಗ್ಡೆ, ಮುದ್ದಣ್ಣ ಶೆಟ್ಟಿ, ಪ್ರೇಮನಾಥ ಶೆಟ್ಟಿ, ಗಂಗಾಧರ ಶೆಟ್ಟಿ, ಪ್ರಕಾಶ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಶಿಮಂತೂರು ಪ್ರವೀಣ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನೋದಾ ಡಿ. ಶೆಟ್ಟಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ ಪದ್ಮನಾಭ ಎಸ್. ಪಯ್ಯಡೆ, ಸಿಎ ಶಂಕರ ಬಿ ಶೆಟ್ಟಿ ಮತ್ತು ಹರೀಶ್ ಕುಮಾರ್ ಕೆ ಅವರನ್ನು ಸನ್ಮಾನಿಸಲಾಯಿತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು.

Write A Comment