ಕರ್ನಾಟಕ

ನ್ಯಾನೊ ಕಾರು ಪಲ್ಟಿ, ಉಡುಪಿ ದಂಪತಿ ಸಾವು, ಪಾರಾದ ಮಕ್ಕಳು

Pinterest LinkedIn Tumblr

accident_webಹಾಸನ: ಟಾಟಾ ನ್ಯಾನೊ ಕಾರು ಪಲ್ಟಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಚನ್ನರಾಯಪಟ್ಡಣ ತಾಲೂಕು ಚಿಕ್ಕಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ. ಕಾರಿನಲ್ಲಿದ್ದ ಅವರ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಉಡುಪಿ ಮೂಲದ ಮುಂಬೈ ನಿವಾಸಿಗಳಾದ ಅಶೋಕ್ ಪ್ರಭು(40) ಮತ್ತು ಅಶ್ವಿನಿ ಪ್ರಭು(35) ಮೃತ ದಂಪತಿ. ಉಡುಪಿಯಿಂದ ಬೆಂಗಳೂರು ಕಡೆಗೆ ತೆರಳುತಿದ್ದ ಕಾರು, ರಾಷ್ಟ್ರೀಯ ಹೆದ್ದಾರಿ 75ರ ಚಿಕ್ಕಗೊಂಡನಹಳ್ಳಿ ಗೇಟ್ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Write A Comment