ಕನ್ನಡ ವಾರ್ತೆಗಳು

ದ.ಕ.ಜಿಲ್ಲಾ ಬಿಜೆಪಿಯಿಂದ ಪಕ್ಷದ ಪ್ರಣಾಳಿಕೆ ಬಿಡುಗಡೆ

Pinterest LinkedIn Tumblr

bjp_pranlike_relise_1

ಮಂಗಳೂರು,ಫೆ.11: ತಾಲೂಕ್ ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಪ್ರಯುಕ್ತ ಭಾರತೀಯ ಜನತಾ ಪಕ್ಷ ಹೊರತಂದಿರುವ ಪಕ್ಷದ ಪ್ರಣಾಳಿಕೆಯನ್ನು ಮಂಗಳೂರಿನ ಪಕ್ಷದ ಕಚೇರಿಯಲ್ಲಿಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಿಡುಗಡೆಗೊಳಿಸಿದರು.

bjp_pranlike_relise_3 bjp_pranlike_relise_2

ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಜನಸ್ನೇಹಿ ಹಾಗೂ ಪಾರದರ್ಶಕಯನ್ನು ಎತ್ತಿಹಿಡಿಯಲು ಪಂಚಾಯತ್ ರಾಜ್ಯ ವ್ಯವಸ್ಥೆಗಾಗಿ ಬಿಜೆಪಿ ಅಮ್ಮ, ಅನ್ನ, ಅಕ್ಷರ, ಆರೋಗ್ಯ ಎಂಬ ಪ್ರಣಾಳಿಕೆಯನ್ನು ತಂದಿದೆ ಎಂದು ತಿಳಿಸಿದರು

ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ಪ್ರತಾಪ್ ಸಿಂಹ ನಾಯಕ್, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಸುಲೋಚನಾಭಟ್, ರುಕ್ಮಯ ಪೂಜಾರಿ, ಕಿಶೋರ್ ರೈ ಮತ್ತಿತರರು ಉಪಸ್ಥಿತರಿದ್ದರು.

Write A Comment