ಕರ್ನಾಟಕ

ಅಮಿತ್‌ ಶಾ ಜತೆ ವಿಮಾನದಲ್ಲಿ ಮಾತುಕತೆ ನಡೆಸಿಲ್ಲ: ಎಚ್‌ಡಿಕೆ

Pinterest LinkedIn Tumblr


ಬೀದರ್‌: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರೊಂದಿಗೆ ನಾನು ಒಪ್ಪಂದ ಮಾಡಿಕೊಂಡಿರುವ ಕುರಿತು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಜಗತ್ತಿನ 9ನೇ ಅದ್ಬುತ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಭಾಲ್ಕಿಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ಹಾಗೂ ಅಮಿತ್‌ ಶಾ ವಿಮಾನದಲ್ಲಿ ಜತೆಯಾಗಿ ಪ್ರಯಾಣಿಸಿದ್ದಾರೆ ಹಾಗೂ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಇದು ಸತ್ಯಕ್ಕೆ ದೂರವಾದ ವಿಚಾರ. ಇಂತಹ ಯಾವುದೇ ಒಪ್ಪಂದ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಈಗಾಗಲೇ ಬಿಎಸ್ಪಿ ಜತೆ ಮೈತ್ರಿ ಮಾಡಿಕೊಂಡಿದ್ದು, ಬೇರೆ ಯಾವುದೇ ಪಕ್ಷದ ಜತೆ ಒಪ್ಪಂದ ಮಾಡಿಕೊಂಡಿಲ್ಲ ಎಂದರು. ಇದೇ ವೇಳೆ ಭಾಲ್ಕಿಯ ಜೆಡಿಎಸ್ ಅಭ್ಯರ್ಥಿ ಪ್ರಕಾಶ್ ಖಂಡ್ರೆ ಪರ ಮತ ಯಾಚನೆ ಮಾಡಿದರು.

Comments are closed.