ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡರ ಪತ್ನಿ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮತಯಂತ್ರ ಇಟ್ಟಿದ್ದ ಸ್ಥಳವೇ ಬದಲಾಯಿತು.
ಗುಂಗ್ರಾಲ್ ಛತ್ರದ ಮತಗಟ್ಟೆಗೆ ಆಗಮಿಸಿದ ಜಿಟಿಡಿ ಪತ್ನಿ ಲಲಿತಾ ಮತಯಂತ್ರ ಇಟ್ಟ ಜಾಗ ಸರಿಯಿಲ್ಲ ಎಂದು ಸಿಬ್ಬಂದಿ ಬಳಿ ಆಕ್ಷೇಪ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಜಾಗ ಬದಲಿಸಿದ ನಂತರ ಅವರು ಮತದಾನ ಮಾಡಿದರು.
ಆ್ಯಂಬುಲೆನ್ಸ್ನಲ್ಲಿ ಬಂದ ಅಭ್ಯರ್ಥಿ
ಕೆ.ಆರ್.ನಗರ ಪಕ್ಷೇತರ ಅಭ್ಯರ್ಥಿ ಹೊಸಹಳ್ಳಿ ವೆಂಕಟೇಶ್ ಆ್ಯಂಬುಲೆನ್ಸ್ನಲ್ಲಿ ಬಂದು ಮತ ಹಾಕಿದರು. ಗುರುವಾರ ರಾತ್ರಿ ಪ್ರಚಾರ ಮುಗಿಸಿ ಹೋಗುವಾಗ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ್ದ ಅವರು ಆ್ಯಂಬುಲೆನ್ಸ್ನಲ್ಲಿ ಬಂದು ವೋಟು ಹಾಕಿದರು.
ಮತದಾನ ಬಹಿಷ್ಕಾರ
ಹುಣಸೂರು ತಾಲೂಕಿನ ಹರೀನಹಳ್ಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಯುವತಿ ಪರಿಹಾರ ನೀಡಲು ಒತ್ತಾಯಿಸಿ ಮತದಾನವನ್ನೇ ಬಹಿಷ್ಕಾರ ಮಾಡಿದ್ದಾರೆ. ಶುಕ್ರವಾರ ಸುರಿದ ಮಳೆಯಿಂದ ಮನೆಯೆದುರು ಇದ್ದ ವಿದ್ಯುತ್ ಕಂಬದಿಂದ ವಿದ್ಯುತ್ ಅವಘಡ ಉಂಟಾಗಿ ಪಲ್ಲವಿ (16) ಮೃತಪಟ್ಟಿದ್ದಳು. ಆಕೆಗೆ ತಂದೆಯೂ ಇಲ್ಲ. ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹಿಸಿದ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿದ್ದಾರೆ.
Comments are closed.