ಮಡಿಕೇರಿ: ತಾಯಿ ಡಾಟಿ ಹಾಗೂ ಸ್ನೇಹಿತರ ಜತೆ ಮಾಂದಲಪಟ್ಟಿಗೆ ತೆರಳಿದ್ದ ಸದಾನಂದ ಗೌಡ ಪುತ್ರ ಕಾರ್ತಿಕ್ ಗೌಡ ಮೇಲೆ ಹಲ್ಲೆಗೆ ಯತ್ನ ನಡೆದಿರುವ ಬಗ್ಗೆ ವರದಿಯಾಗಿದೆ.
ಪ್ರವಾಸಕ್ಕೆ ತೆರಳಿದ್ದ ಕಾರ್ತಿಕ್ ಗೌಡ ದಾರಿಗೆ ಅಡ್ಡಲಾಗಿ ವಾಹನ ನಿಲ್ಲಿಸಿದ್ದರು. ಈ ಬಗ್ಗೆ ಇತರೆ ಪ್ರವಾಸಿಗರು ಪ್ರಶ್ನಿಸಿದ್ದು, ಮಾತಿಗೆ ಮಾತು ಬೆಳೆದು ಗಲಾಟೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಘಟನೆಯಲ್ಲಿ ಕಾರ್ತಿಕ ಗೌಡರ ಕೊರಳಲ್ಲಿದ್ದ ಚೈನು ತುಂಡಾಗಿದೆ. ಸ್ಥಳಕ್ಕೆ ಎಸ್ಪಿ ರಾಜೇಂದ್ರ ಪ್ರಸಾದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ನೇತೃತ್ವದಲ್ಲಿ ರಾಜಿಸಂದಾನ ನಡೆದಿದ್ದು, ಪ್ರಕರಣ ಸುಖಾಂತ್ಯ ಕಂಡಿದೆ.
Comments are closed.