ರಾಷ್ಟ್ರೀಯ

ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ ಅವರ ರಾಜ್‌ಕೋಟ್‌ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ

Pinterest LinkedIn Tumblr


ರಾಜ್‌ಕೋಟ್‌: ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ ಅವರ ಇಲ್ಲಿನ ನಿವಾಸದ ಮುಂದೆ ಇಂದು ಶುಕ್ರವಾರ ಬೆಳಗ್ಗೆ ಕಾಂಗ್ರೆಸ್‌ ಕಾರ್ಯಕರ್ತರ ಒಂದು ಗುಂಪು ಜಮಾಯಿಸಿ ಘೋಷಣೆ ಕೂಗಿದುದನ್ನು ಅನುಸರಿಸಿ ಪೊಲೀಸರು 30 ಮಂದಿಯನ್ನು ವಶಕ್ಕೆ ತೆಗೆದುಕೊಂಡರು.

ಬಹುಮತ ಇಲ್ಲದಿದ್ದರೂ ಏಕೈಕ ದೊಡ್ಡ ಪಕ್ಷವೆಂಬ ಕಾರಣಕ್ಕೆ ಕರ್ನಾಟಕದಲ್ಲಿ ಬಿಜೆಪಿಯನ್ನು ಸರಕಾರ ರಚಿಸುವಂತೆ ಆಹ್ವಾನಿಸಿದ ರಾಜ್ಯಪಾಲ ವಜೂಭಾಯಿ ವಾಲಾ ಅವರ ನಿರ್ಧಾರವನ್ನು ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟಿಸಲು ಅವರ ನಿವಾಸದ ಮುಂದೆ ಜಮಾಯಿಸಿದ್ದರು.

ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ ಅವರ ನಿರ್ಧಾರವು ಪ್ರಜಾಸತ್ತೆಯ ಮೇಲಿನ ಒಂದು ಕಪ್ಪು ಚುಕ್ಕೆ ಎಂದು ಕಾಂಗ್ರೆಸ್‌ ನಗರ ಘಟಕದ ಮುಖ್ಯಸ್ಥ ಮಹೇಶ್‌ ರಾಜಪೂತ್‌ ಅವರು ಹೇಳಿದರು. ವಜೂಭಾಯಿ ವಾಲಾ ಅವರ ನಿವಾಸವು ಇಲ್ಲಿನ ಕಳವಾಡ ರಸ್ತೆಗೆ ಸಮೀಪದ ನೂತನ ನಗರ ಸೊಸೈಟಿಯಲ್ಲಿ ಇದೆ.

Comments are closed.