ಕರ್ನಾಟಕ

ಯಡಿಯೂರಪ್ಪ ಪುತ್ರ ವಿಜಯೇಂದ್ರರಿಂದ ಯಲ್ಲಾಪುರ ಕಾಂಗ್ರೆಸ್ ಶಾಸಕರೊಬ್ಬರ ಪತ್ನಿಗೆ ಆಮಿಷವೊಡ್ಡಿದ ಆರೋಪ; ಆಡಿಯೊ ಕ್ಲಿಪ್ ಬಿಡುಗಡೆ

Pinterest LinkedIn Tumblr

ಬೆಂಗಳೂರು: ವಿಶ್ವಾಸಮತ ಯಾಚನೆ ವೇಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬೆಂಬಲಿಸುವಂತೆ ಕಾಂಗ್ರೆಸ್ ಶಾಸಕರೊಬ್ಬರ ಪತ್ನಿಗೆ ಆಮಿಷವೊಡ್ಡಿದ್ದಾರೆ ಎಂಬ ಆರೋಪ ಬಿಎಸ್ ವೈ ಪುತ್ರ ವಿಜಯೇಂದ್ರ ವಿರುದ್ಧ ಕೇಳಿ ಬಂದಿದೆ.

ಯಲ್ಲಾಪುರದ ಶಾಸಕ ಶಿವರಾಮ ಹೆಬ್ಬಾರ ಅವರ ಪತ್ನಿ ಅವರಿಗೆ ವಿಜಯೇಂದ್ರ ಹಾಗೂ ಯಡಿಯೂರಪ್ಪ ಆಪ್ತ ಬಿಜಿ ಪುಟ್ಟಸ್ವಾಮಿ ಅವರು ದೂರವಾಣಿ ಕರೆ ಮಾಡಿ ಸಚಿವ ಸ್ಥಾನ ಹಾಗೂ ಐದು ಕೋಟಿ, ಸಚಿವ ಸ್ಥಾನ ಬೇಡ ಎಂದರೆ 15 ಕೋಟಿ ರುಪಾಯಿ, ಹೆಬ್ಬಾರ ಪುತ್ರನ ವಿರುದ್ಧ ಇರುವ ಗಣಿಗಾರಿಕೆ ಪ್ರಕರಣದಿಂದ ಪಾರು ಮಾಡುವ ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಉಗ್ರಪ್ಪ ಆರೋಪಿಸಿದ್ದಾರೆ.

ಶಾಸಕರ ಪತ್ನಿ ಜತೆ ವಿಜಯೇಂದ್ರ ಹಾಗೂ ಪುಟ್ಟಸ್ವಾಮಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋವನ್ನು ಉಗ್ರಪ್ಪ ರಿಲೀಸ್ ಮಾಡಿದ್ದಾರೆ. ಬಿಜೆಪಿ ಶಾಸಕರ ಕುದುರೆ ವ್ಯಾಪಾರ ಮಾಡುತ್ತಿರುವುದು ಈ ಆಡಿಯೋದಿಂದ ಬಹಿರಂಗವಾಗಿದೆ.

Comments are closed.