ಮನೋರಂಜನೆ

“ಕನ್ನಡಕ್ಕಾಗಿ ಒಂದನ್ನು ಒತ್ತಿ’ ಶೀಘ್ರದಲ್ಲೇ ರಾಜ್ಯಾದ್ಯಂತ ಬಿಡುಗಡೆ

Pinterest LinkedIn Tumblr


ಎದಬಿಡಂಗಿ ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ಕನ್ನಡಕ್ಕಾಗಿ ಒಂದನ್ನು ಒತ್ತಿ” ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗಷ್ಟೇ ಬಿಡುಗಡೆಯಾದ ಚಿತ್ರದ ಹಾಡುಗಳು ಕೇಳುಗರ ಮನ ಗೆದ್ದಿದೆ.

ಚಿತ್ರದ ಹಾಡುಗಳನ್ನು ಯೂಟ್ಯೂಬ್‍ನಲ್ಲೂ 5ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳ ಸೀಡಿಗಳನ್ನು ಯೋಗರಾಜ್ ಭಟ್ ಅವರು ತಮ್ಮ ಪಂಚರಂಗಿ ಆಡಿಯೋ ಮೂಲಕ ಲೋಕಾರ್ಪಣೆ ಮಾಡಿದ್ದಾರೆ.

ಕುಶಾಲ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ರಿಷಿಕೇಶ್ ಅವರ ಛಾಯಾಗ್ರಹಣವಿದೆ. ಅರ್ಜುನ್ ಕಿಟ್ಟು ಅವರ ಸಂಕಲನವಿರುವ ಈ ಚಿತ್ರದ ಹಾಡುಗಳನ್ನು ಡಾ. ವಿ.ನಾಗೇಂದ್ರಪ್ರಸಾದ್, ಯೋಗರಾಜ್ ಭಟ್, ಕುಶಾಲ್ ಬರೆದಿದ್ದಾರೆ.

ಅವಿನಾಶ್ ಎಸ್ ಶತಮರ್ಷಣ, ಕೃಷಿ ತಾಪಂಡ, ಚಿಕ್ಕಣ್ಣ, ದತ್ತಣ್ಣ, ಮಿಮಿಕ್ರಿ ಗೋಪಿ, ಸುಚೇಂದ್ರ ಪ್ರಸಾದ್, ಜಯಶ್ರೀ, ರಂಗಾಯಣ ರಘು, ಉಮೇಶ್, ಹೆಚ್.ಎಂ.ಟಿ ವಿಜಯ್, ರವಿ(ಟಾಮಿ) ಸತಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Comments are closed.