ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ರಾಮನಗರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ದೇವೇಗೌಡರ ಕುಟುಂಬದಿಂದಲೇ ಯಾರಾದರೂ ಸ್ಪರ್ಧಿಸುತ್ತಾರೆಯೇ ಅಥವಾ ಬೇರೆ ಯಾರಾದರೂ ಸ್ಪರ್ಧಿಸುವರೇ ಎಂಬ ವಿಚಾರವಾಗಿ ಜಿಜ್ಞಾಸೆ ಎದುರಾಗಿದೆ.
ಹೀಗಿರುವಾಗಲೇ ಇದೇ ವಿಚಾರವಾಗಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಎಚ್ಡಿಕೆ ಪತ್ನಿ ಅನಿತಾ ಕುಮಾರಸ್ವಾಮಿ ಅವರು, “ಉಪಚುನಾವಣೆಗೆ ನಿಖಿಲ್ ಮತ್ತು ನನ್ನ ಹೆಸರು ಸ್ಪರ್ಧೆಯಲ್ಲಿರುವುದು ನಿಜ. ಚುನಾವಣೆ ದಿನಾಂಕ ಘೋಷಣೆಯಾಗಲಿ. ನಂತರ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ,” ಎಂದು ಹೇಳಿದ್ದಾರೆ.
ಈ ಮೂಲಕ ರಾಮನಗರದಲ್ಲಿ ದೇವೇಗೌಡರ ಕುಟುಂಬದವರು, ಅದರಲ್ಲೂ ಸಿಎಂ ಕುಮಾರಸ್ವಾಮಿ ಅವರ ಕುಟುಂಬದವರೇ ಸ್ಪರ್ಧೆ ಮಾಡುವ ಸಾಧ್ಯತೆಗಳು ಗೋಚರಿಸಿವೆ.
Comments are closed.