ಕರ್ನಾಟಕ

ವರದಕ್ಷಿಣೆಗಾಗಿ ಪತ್ನಿಗೆ ಬಲವಂತವಾಗಿ ವಿಷ ಕುಡಿಸಿ, ಮರ್ಮಾಂಗಕ್ಕೆ ಖಾರದ ಪುಡಿ ಹಾಕಿದ ಪೊಲೀಸ್​ ಪೇದೆ !

Pinterest LinkedIn Tumblr

ಹಾಸನ: ವರದಕ್ಷಿಣೆಗಾಗಿ ಪೊಲೀಸ್​ ಪೇದೆಯೊಬ್ಬ ಪತ್ನಿಗೆ ಬಲವಂತವಾಗಿ ವಿಷ ಕುಡಿಸಿ, ಮರ್ಮಾಂಗಕ್ಕೆ ಖಾರದ ಪುಡಿ ಹಾಕಿ ಅಮಾನವೀಯವಾಗಿ ಹಿಂಸಿಸಿರುವ ಘಟನೆ ಅರಕಲಗೂಡು ತಾಲೂಕಿನ ಮಸತ್ತೂರಿನಲ್ಲಿ ಭಾನುವಾರ ನಡೆದಿದೆ.

ಕೊಣನೂರು ಪೊಲೀಸ್​ ಠಾಣೆಯ ಪೇದೆ ಅರುಣ್‌ ದುಡ್ಡಿನ ದುರಾಸೆಯಿಂದ ಪತ್ನಿಗೆ ಚಿತ್ರಹಿಂಸೆ ನೀಡಿದ್ದಾನೆ. ಅಲ್ಲದೆ, ಪತ್ನಿ ಕುಟುಂಬಕ್ಕೆ ಕರೆ ಮಾಡಿ ಬೆದರಿಕೆಯನ್ನೂ ಹಾಕಿದ್ದಾನೆ.

ಹಲ್ಲೆಗೊಳಗಾಗಿರುವ ಸಂತ್ರಸ್ತೆ ಮಹಿಳೆ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಅರಕಲಗೂಡು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.