ಹಾಸನ: ವರದಕ್ಷಿಣೆಗಾಗಿ ಪೊಲೀಸ್ ಪೇದೆಯೊಬ್ಬ ಪತ್ನಿಗೆ ಬಲವಂತವಾಗಿ ವಿಷ ಕುಡಿಸಿ, ಮರ್ಮಾಂಗಕ್ಕೆ ಖಾರದ ಪುಡಿ ಹಾಕಿ ಅಮಾನವೀಯವಾಗಿ ಹಿಂಸಿಸಿರುವ ಘಟನೆ ಅರಕಲಗೂಡು ತಾಲೂಕಿನ ಮಸತ್ತೂರಿನಲ್ಲಿ ಭಾನುವಾರ ನಡೆದಿದೆ.
ಕೊಣನೂರು ಪೊಲೀಸ್ ಠಾಣೆಯ ಪೇದೆ ಅರುಣ್ ದುಡ್ಡಿನ ದುರಾಸೆಯಿಂದ ಪತ್ನಿಗೆ ಚಿತ್ರಹಿಂಸೆ ನೀಡಿದ್ದಾನೆ. ಅಲ್ಲದೆ, ಪತ್ನಿ ಕುಟುಂಬಕ್ಕೆ ಕರೆ ಮಾಡಿ ಬೆದರಿಕೆಯನ್ನೂ ಹಾಕಿದ್ದಾನೆ.
ಹಲ್ಲೆಗೊಳಗಾಗಿರುವ ಸಂತ್ರಸ್ತೆ ಮಹಿಳೆ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.