ಕರಾವಳಿ

ಕಾಂಗ್ರೆಸ್ – ಜೆಡಿಎಸ್ ಕಿತ್ತಾಟ – ಶೀಘ್ರದಲ್ಲೇ ಸಮಿಶ್ರ ಸರ್ಕಾರ ಪತನ : ಕೇಂದ್ರ ಸಚಿವ ಡಿವಿಎಸ್

Pinterest LinkedIn Tumblr

ಮಂಗಳೂರು, ಜುಲೈ.9: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಕುರ್ಚಿಗಾಗಿ ಕಿತ್ತಾಟ ನಡೆಸುತ್ತಿದ್ದು, ಶೀಘ್ರದಲ್ಲೇ ಸಮಿಶ್ರ ಸರ್ಕಾರ ಪತನವಾಗಲಿದೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದರು. ಅವರು ಮಂಗಳೂರಿನಲ್ಲಿ ಪತ್ರಕರ್ತರ ಜೊತೆ ಮಾತನಾಡುತ್ತಿದ್ದರು.

ರಾಜ್ಯದಲ್ಲಿ ಅಭಿವೃದ್ದಿ ಕಾರ್ಯಗಳು ಸಂಪೂರ್ಣ ಕುಂಠಿತವಾಗಿದ್ದು, ಜನರು ಪರಿತಪಿಸುತ್ತಿದ್ದಾರೆ. ರಾಜ್ಯ ಸರ್ಕಾರಕ್ಕೆ ಅಧಿಕಾರಿಗಳ ಮೇಲೆ ಹಿಡಿತವಿಲ್ಲ. ರಾಜ್ಯದಲ್ಲಿ ತೀವ್ರ ಮಳೆಯಾದರೂ ಜನರ ಸಂಕಷ್ಟಕ್ಕೆ ಸರ್ಕಾರ ಧಾವಿಸಿಲ್ಲ. ಸರ್ಕಾರ ಮುಳುಗಲಿದೆ ಎಂಬುದು ಎರಡೂ ಪಕ್ಷಕ್ಕೂ ಗೊತ್ತಿದೆ ಎಂದು ಸದಾನಂದ ಗೌಡ ತಿಳಿಸಿದರು.

Comments are closed.