ರಾಷ್ಟ್ರೀಯ

ಅಪಾರ್ಟ್ ಮೆಂಟ್ ನಿಂದ ಕೆಳಗೆ ಹಾರಿ ಗಗನಸಖಿ ಸಾವಿನ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸರಿಂದ ಪತಿಯ ಬಂಧನ

Pinterest LinkedIn Tumblr

ನವದೆಹಲಿ: ದೆಹಲಿಯಲ್ಲಿ ಅಪಾರ್ಟ್ ಮೆಂಟ್ ನಿಂದ ಕೆಳಗೆ ಹಾರಿ ಗಗನಸಖಿಯೊರ್ವಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ 39 ವರ್ಷದ ಅನಿಸಿಯಾ ಬಾತ್ರಾ ಜರ್ಮನ್ ಏರ್ ಲೈನ್ಸ್ ನ ಉದ್ಯೋಗಿಯಾಗಿದ್ದು ಜುಲೈ 13ರಂದು ಸಂಜೆ ಪಂಚಶೀಲ ಪಾರ್ಕ್ ಕಟ್ಟಡದಿಂದ ಕೆಳಗೆ ಹಾರಿದ್ದರು. ಕೂಡಲೇ ಆಕೆಯ ಪತಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಮಾರ್ಗಮಧ್ಯೆ ಅನಿಸಿಯಾ ಮೃತಪಟ್ಟಿದ್ದರು.

ಅನಿಸಿಯಾದು ಆತ್ಮಹತ್ಯೆಯಲ್ಲ ಕೊಲೆಯೆಂದು ಆಕೆಯ ಪೋಷಕರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸಾಫ್ಟ್ ವೇರ್ ಉದ್ಯೋಗಿ ಮಾಯಾಂಕ್ ಸಿಂಘ್ವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಮಂಗಳವಾರ ಮಾಯಾಂಕ್ ಸಿಂಘ್ವಿಯನ್ನು ಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ.

Comments are closed.