ಕರಾವಳಿ

ಮೂಡುಶೆಡ್ಡೆ ದನಕಳ್ಳತನ ಪ್ರಕರಣದ ಮತ್ತೋರ್ವ ಆರೋಪಿ ಸೆರೆ – ಬಂಧಿತರ ಸಂಖ್ಯೆ ಮೂರಕ್ಕೇರಿಕೆ

Pinterest LinkedIn Tumblr

ಮಂಗಳೂರು : ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆ ಬೈಲು ಎಂಬಲ್ಲಿನ ಮನೆಯ ಹಟ್ಟಿಯಿಂದ ಎರಡು ದನಗಳನ್ನು ಕಳವು ಮಾಡಿದ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಬಜ್ಪೆ ಕೊಲ್ಚಾರ್ ನಿವಾಸಿ ನಿಸಾರುದ್ದೀನ್ ಯಾನೆ ನಿಸಾರ್ ಪಾರಿವಾಳ (23) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಈ ಹಿಂದೆ ಬಜಪೆ ಪೊಲೀಸ್ ಠಾಣೆಯಲ್ಲಿ ಕಳವು, ಮನೆ ಕಳ್ಳತನ ಹಾಗೂ ದನ ಕಳ್ಳತನ ಹೀಗೆ ಒಟ್ಟು 4 ಪ್ರಕರಣ ದಾಖಲಾಗಿದೆ.

ಜೂ.16, 17ರಂದು ಬೆಳಿಗ್ಗಿನ ಜಾವ 03-30 ಗಂಟೆ ಸುಮಾರಿಗೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆ ಬೈಲು ಎಂಬಲ್ಲಿನ ನಿವಾಸಿ ಪುರುಷೋತ್ತಮ ಎಂಬವರ ಮನೆಯ ಹಟ್ಟಿಯಲ್ಲಿ ಕಟ್ಟಿ ಹಾಕಿದ ದನಗಳನ್ನು ಬಿಳಿ ಬಣ್ಣದ ಟಾಟಾ ಸುಮೋದಲ್ಲಿ ಬಂದ ದನಕಳ್ಳರು ಮನೆಯವರನ್ನು ಹೆದರಿಸಿ 2 ದನಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಪೈಕಿ ಇಮ್ರಾನ್ ಯಾನೆ ಕುಟ್ಟ ಇಮ್ರಾನ್ ಮತ್ತು ಉಮ್ಮರ್ ಫಾರೂಕ್ ಎಂಬವರನ್ನು ಈಗಾಗಲೇ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಸ್ಕಾರ್ಪಿಯೋ ಕಾರನ್ನು ವಶಪಡಿಸಿಕೊಂಡಿದ್ದರು.

ಪತ್ತೆ ಕಾರ್ಯದಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಶಾಂತಾರಾಮ, ಪಿಎಸ್ಐ ಯವರಾದ ಶ್ಯಾಮ್ ಸುಂದರ್ ಹೆಚ್ ಎಂ ಮತ್ತು ಹೆಚ್.ಡಿ ಕಬ್ಬಾಳ್ ರಾಜ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ಮನೆಯವರಿಗೆ ತಲವಾರು ತೋರಿಸಿ ಹೆದರಿಸಿ ಹಟ್ಟಿಯಿಂದ ದನಕಳವು ; ಇಬ್ಬರು ಆರೋಪಿಗಳ ಸೆರೆ

Comments are closed.