ಬೆಂಗಳೂರು: ರಾಮನಗರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಿಂದಲೇ ಜೆಡಿಎಸ್ಗೆ ಸಂಕಷ್ಟ ಎದುರಾಗಿದೆ. ಇದೇ ನವೆಂಬರ್. 3 ರಂದು ಎದುರಾಗಲಿರುವ ವಿಧಾನಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಇಕ್ಬಾಲ್ ಹುಸೇನ್ ಕಣಕ್ಕಿಳಿಯಲ್ಲಿದ್ದಾರೆಯಂತೆ. ಹೀಗಾಗಿ ಸಿಎಂ ಭದ್ರಕೋಟೆಯಲ್ಲಿಯೇ ಅನಿತಾ ಕುಮಾರಸ್ವಾಮಿಯವರಿಗೆ ಸೋಲಿನ ಭೀತಿ ಕಾಡುತ್ತಿದೆ ಎನ್ನಲಾಗಿದೆ.
ರಾಜ್ಯದಲ್ಲಿ ನಡೆಯಲಿರುವ ಲೋಕಸಭಾ/ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಎನ್ನಲಾಗಿತ್ತು. ಆದರೆ, ರಾಮನಗರದಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಗೆ ಕಾಂಗ್ರೆಸ್ನ ವಿಧಾನಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಜೆಡಿಎಸ್ಗೆ ನಾವು ಬೆಂಬಲ ನೀಡುವುದಿಲ್ಲ ಎಂದು ಬಹಿರಂಗವಾಗಿ ಘೋಷಿಸಿದ್ದಾರೆ.
ಇದೀಗ ಘೋಷಣೆಯಂತೆಯೇ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಇಕ್ಬಾಲ್ ಹುಸೇನ್ ಅವರನ್ನು ಅಖಾಡಕ್ಕಿಳಿಸಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ರಾಮನಗರದಲ್ಲಿ ಸುಲಭವಾಗಿ ಗೆಲ್ಲಬಹುದು ಎಂದು ಯೋಚಿಸಿದ್ದ ಸಿಎಂಗೆ ಕಾಂಗ್ರೆಸ್ ನಾಯಕರ ಬಂಡಾಯ ತಲೆನೋವಾಗಿ ಪರಿಣಮಿಸಿದೆ. ಮೈತ್ರಿಯಲ್ಲಿ ಸ್ಪರ್ಧಿಸಲು ಅವಕಾಶಗಳಿದ್ದರೂ ಕೈ ಪಾಳೆಯದ ಕೆಲವು ನಾಯಕರಿಂದ ಅಪಸ್ವರ ಕೇಳಿ ಬಂದಿದೆ.
ಇನ್ನು ತಮ್ಮದೇ ಜೆಡಿಎಸ್ ಪಕ್ಷದ ಕಾರ್ಯಕರ್ತರಲ್ಲಿಯೂ ಮೈತ್ರಿ ವಿಚಾರದ ಸಲುವಾಗಿ ಕೆಲವು ಅಸಮಾಧಾನಗಳಿವೆ ಎನ್ನಲಾಗಿದೆ. ಮತ್ತೊಂದೆಡೆ ಇಕ್ಬಾಲ್ ಹುಸೇನ್ ಕಣಕ್ಕಿಳಿದಿದ್ದ ಕಾರಣದಿಂದಲೇ ಕಳೆದ ಬಾರಿ ಕೇವಲ 22 ಸಾವಿರ ಅಂತರದ ಮತಗಳಿಂದ ಸಿಎಂ ಕುಮಾರಸ್ವಾಮಿ ಗೆದ್ದಿದ್ದರು. ಆದರೆ, ಈ ಬಾರಿ ಅನಿತಾ ಕುಮಾರಸ್ವಾಮಿ ವಿರುದ್ಧ ಮುಸ್ಲಿಂ ಸಮುದಾಯದ ಮತಗಳ ಮೂಲಕ ಇಕ್ಬಾಲ್ ಗೆದ್ದರು ಆಶ್ಚರ್ಯವಿಲ್ಲ.
ಅನಿತಾ ಕುಮಾರಸ್ವಾಮಿ ಅವರ ಎದುರು ಇಕ್ಬಾಲ್ ಹುಸೇನ್ ನಿಂತರೇ ಜೆಡಿಎಸ್ಗೆ ಗೆಲುವು ಕಷ್ಟವಾಗಲಿದೆ. ಕಳೆದ ಸಲ ಚುನಾವಣೆಯಲ್ಲಿ 69 ಸಾವಿರ ಮತಗಳಿಸಿದ್ದ ಇಕ್ಬಾಲ್, ಅನಿತಾ ಕುಮಾರಸ್ವಾಮಿ ಅವರಿಗೆ ಪೈಪೋಟಿ ನೀಡುವ ಸಾಧ್ಯತೆಗಳು ಹೆಚ್ಚಿವೆ. ಹೀಗಾಗಿ ಕಾಂಗ್ರೆಸ್ ಜೊತೆಗೆ ಮೈತ್ರಿ ಒಪ್ಪಂದವಿದ್ದರೂ ಮಾಜಿ ಪ್ರಧಾನಿ ಎಚ್ಡಿ ದೇವೆಗೌಡ ನೇತೃತ್ವದ ಜೆಡಿಎಸ್ಗೆ ಆತಂಕದಲ್ಲಿದೆ.
ಮೈತ್ರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕ ಲಿಂಗಪ್ಪ ಅವರು ಈಗಾಗಲೇ ಅಪಸ್ವರ ಎತ್ತಿದ್ದಾರೆ. ರಾಮನಗರ ಉಪಚುನಾವಣೆಯಲ್ಲಿ ಬಿಜೆಪಿಗಾಗಲೀ, ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರಿಗಾಗಲೀ ಬೆಂಬಲ ನೀಡುವುದಿಲ್ಲ. ನಾವು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಆಲೋಚನೆ ಮಾಡಿದ್ದೇವೆ ಎಂದು ಹೇಳುವ ಮೂಲಕ ಲಿಂಗಪ್ಪ ಅವರು ಎರಡು ಪಕ್ಷಗಳನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ನಾಯಕರು ಸ್ಥಳೀಯ ರಾಜಕೀಯ ಪರಿಸ್ಥಿತಿ ನೋಡಬೇಕಿದೆ. ರಾಮನಗರ ಕ್ಷೇತ್ರವನ್ನು ಸಂಪೂರ್ಣವಾಗಿ ಜೆಡಿಎಸ್ಗೆ ಬಿಟ್ಟುಕೊಟ್ಟರೆ, ನಾವು ಬಂಡಾಯ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಸದ್ಯದ ರಾಜಕೀಯ ಬೆಳವಣಿಗೆಯನ್ನು ಗಮನಿಸಿದರೆ, ಕಾಂಗ್ರೆಸ್ನಿಂದ ಬಂಡಾಯ ಅಭ್ಯರ್ಥಿಯನ್ನು ಹಾಕುವ ಸಾಧ್ಯತೆಗಳಿವೆ ಎಂದು ಇಕ್ಬಾಲ್ ಅನ್ಸಾರಿ ಸ್ಪರ್ಧೆ ವಿಚಾರಕ್ಕೆ ಇಂಬು ನೀಡಿದ್ದಾರೆ.
Comments are closed.