ಮಂಗಳೂರು, ಅಕ್ಟೋಬರ್.14: ಮಂಗಳೂರಿನ ಪಣಂಬೂರು ಬೀಚ್ನಲ್ಲಿ ಸಮುದ್ರಕ್ಕಿಳಿದ ಕಾಲೇಜು ವಿದ್ಯಾರ್ಥಿಯೋರ್ವ ನೀರುಪಾಲಾದ ಘಟನೆ ಶನಿವಾರ ಸಂಭವಿಸಿದೆ.
ನೀರುಪಾಲಾಗಿ ನಾಪತ್ತೆಯಾದ ವಿದ್ಯಾರ್ಥಿಯನ್ನು ಬೆಳ್ತಂಗಡಿ ಗೇರುಕಟ್ಟೆ ನಿವಾಸಿ ಕೇಶವ ಎಂಬವರ ಪುತ್ರ ಸುಧಾರಾಜ್ (18) ಎಂದು ಗುರುತಿಸಲಾಗಿದೆ.
ಬೆಳ್ತಂಗಡಿಯ ಸರಕಾರಿ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಸುಧಾರಾಜ್ 10 ಮಂದಿ ಸ್ನೇಹಿತರೊಂದಿಗೆ ಪಣಂಬೂರು ಬೀಚ್ಗೆ ಬಂದಿದ್ದರು. ಬೀಚ್ನಲ್ಲಿ ಕಬಡ್ಡಿ ಆಡಿ, ಬಳಿಕ ತಮ್ಮ ಸ್ನೇಹಿತರೊಂದಿಗೆ ಸಮುದ್ರಕ್ಕಿಳಿದ ಅವರು ನಾಪತ್ತೆಯಾಗಿದ್ದು, ಇನ್ನೂ ಪತ್ತೆಯಾಗಿಲ್ಲ.
ಪಣಂಬೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Comments are closed.