ಕರಾವಳಿ

ಬಿಜೆಪಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Pinterest LinkedIn Tumblr

ಮಂಗಳೂರು : ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಉತ್ಸವವನ್ನು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ಆಚರಿಸಲಾಯಿತು.

ವಾಲ್ಮೀಕಿ ವೃತ್ತಾಂತ, ವಾಲ್ಮೀಕಿ ರಾಮಾಯಣ ಮತ್ತು ಸಾಂದರ್ಭಿಕ ವಿಚಾರಗಳ ಬಗ್ಗೆ ಜಿಲ್ಲಾ ಉಪಾಧ್ಯಕ್ಷ ರವಿಶಂಕರ ಮಿಜಾರ್ ಬೌದ್ಧಿಕ್ ನೀಡಿದರು.

ಮಂಗಳೂರು ನಗರ ಉಪಾಧ್ಯಕ್ಷೆ ಮೀರಾ ಕರ್ಕೇರಾ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ರಮೇಶ್ ಕಂಡೆಟ್ಟು ಸ್ವಾಗತಿಸಿ ಇನ್ನೊರ್ವ ಪ್ರಧಾನ ಕಾರ್ಯದರ್ಶಿ ಭಾಸ್ಕರಚಂದ್ರ ಶೆಟ್ಟಿ ಧನ್ಯವಾದ ನೀಡಿದರು. ಮಂಡಲ ಉಪಾಧ್ಯಕ್ಷೆ ಕಾತ್ಯಾಯಿನಿ ನಿರ್ವಹಿಸಿದರು

Comments are closed.