ಕರಾವಳಿ

ಆರ್‌ಎಸ್‌ಎಸ್‌ ಹಿರಿಯ ಮುಖಂಡ ರಘುನಂದನ್ ಶೆಣೈ ನಿಧನಕ್ಕೆ ಶಾಸಕ ಕಾಮತ್ ಸಂತಾಪ

Pinterest LinkedIn Tumblr

ವಾಸುದೇವ್ ರಘುನಂದನ್ ಶೆಣೈ

ಮಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮುಖಂಡ ಉದ್ಯಾವರ ವಾಸುದೇವ್ ರಘುನಂದನ್ ಶೆಣೈ ಅವರ ನಿಧನಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮ ಜೀವನವನ್ನು ಸಂಘಕ್ಕಾಗಿ ಅರ್ಪಿಸಿದ ಶೆಣೈ ಅವರು ಆರ್ ಎಸ್ ಎಸ್ ಅಂಗಸಂಸ್ಥೆ ಸೇವಾ ಭಾರತಿಯ ಮೂಲಕ ವಿಕಲಚೇತನ ಮಕ್ಕಳ ಆರೋಗ್ಯ, ಶಿಕ್ಷಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ವೇದವ್ಯಾಸ ಕಾಮತ್ ತಿಳಿಸಿದ್ದಾರೆ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಶಾಸಕ ಕಾಮತ್ ಪ್ರಾರ್ಥಿಸಿದ್ದಾರೆ.

Comments are closed.