ಬೆಂಗಳೂರು: ನಟ ದುನಿಯಾ ವಿಜಯ್ ವಿರುದ್ಧ ಪ್ರಕರಣಗಳ ಮೇಲೆ ಪ್ರಕರಣಗಳು ದಾಖಲಾಗುತ್ತಿವೆ. ಪಾಣಿಪುರಿ ಕಿಟ್ಟಿ, ಪುತ್ರಿ ಮೋನಿಕಾ ಕೇಸ್ ಬೆನ್ನಲ್ಲೇ, ವಿಜಿ ಹಾಗೂ ಕುಟುಂಬದವರ ವಿರುದ್ಧ ಶಾಂತಿಭಂಗ ಕೇಸ್ ದಾಖಲಾಗಿದೆ.
ಹೌದು, ಈ ಬಾರಿ ದುನಿಯಾ ವಿಜಿ, ಇಬ್ಬರು ಪತ್ನಿಯರು, ಮಕ್ಕಳು ಹಾಗೂ ಬಾಡಿಗಾರ್ಡ್ ವಿರುದ್ಧ ಗಿರಿನಗರ ಪೊಲೀಸರು ಶಾಂತಿಭಂಗದ ಕೇಸ್ ದಾಖಲಿಸಿಕೊಂಡಿದ್ದಾರೆ. ಹೀಗಾಗಿ ದುನಿಯಾ ವಿಜಯ್ರನ್ನು ಡಿಸಿಪಿ ಅಣ್ಣಮಲೈ ಮುಂದೆ ಹಾಜರು ಪಡಿಸಿಲಿದ್ದಾರಂತೆ.
ಈ ಹಿಂದೆ ಆಗಿದ್ದೇನು?:
ಅವಾಚ್ಯ ಶಬ್ಧಗಳಿಂದ ನಿಂದಿಸಿದ ಹಿನ್ನೆಲೆಯಲ್ಲಿ ವಿಜಿ ಮೊದಲ ಪುತ್ರಿ ಮೋನಿಕಾ ತನ್ನ ತಂದೆ ವಿಜಿ, ಚಿಕ್ಕಮ್ಮ ಕೀರ್ತಿ ಗೌಡ ಸೇರಿದಂತೆ ಐವರ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ನಾನು ಮನೆಯ ಒಳಗೆ ಹೋಗುವಾಗ ನನ್ನ ತಂದೆ ವಿಜಿ, ಕೀರ್ತಿಗೌಡ, ಹೇಮಂತ್, ವಿನೋದ್ ಹಾಗೂ ಕಾರ್ ಡ್ರೈವರ್ ಮಹಮ್ಮದ್ ಸೇರಿ ನನ್ನನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೇ ನನ್ನನ್ನು ಬೈದು ಕಾಲಿನಿಂದ ಹಾಗೂ ಕೆಲವು ಮಾರಕಸ್ತ್ರಗಳಿಂದ ಹೊಡೆದು ಗೋಡೆಗೆ ನನ್ನ ತಲೆಯನ್ನು ಹಿಡಿದು ಹೊಡೆದಿದ್ದಾರೆ ಎಂದು ಮೋನಿಕಾ ದೂರಿನಲ್ಲಿ ಹೇಳಿಕೊಂಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 34, 324, 323, 504 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪುತ್ರಿ ಮೋನಿಕಾ ಪ್ರಕರಣಕ್ಕೂ ಮುನ್ನ ದುನಿಯಾ ವಿಜಿ ಜಿಮ್ ಟ್ರೈನರ್ ಮಾರುತಿಗೌಡ ಹಲ್ಲೆ ಪ್ರಕರಣದಲ್ಲಿ ಸಿಲುಕಿದ್ದರು. ಹೀಗೆ ಒಂದೂವರೇ ತಿಂಗಳಿನಲ್ಲಿ ವಿಜಯ್ ವಿರುದ್ಧ ಒಂದೊಂದೇ ಪ್ರಕರಣಗಳು ದಾಖಲಾಗುತ್ತಿವೆ.
Comments are closed.