ರಾಷ್ಟ್ರೀಯ

ಸಿಆರ್ ಪಿಎಫ್ ವಾಹನ ಸ್ಫೋಟಿಸಿದ ನಕ್ಸಲರು, ನಾಲ್ವರು ಸಾವು

Pinterest LinkedIn Tumblr


ರಾಯಪುರ್: ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಛತ್ತೀಸ್ ಗಢದಲ್ಲಿ ಶನಿವಾರ ನಕ್ಸಲರು ಸಿಆರ್ ಪಿಎಫ್ ಸಿಬ್ಬಂದಿ ತೆರಳುತ್ತಿದ್ದ ವಾಹನವನ್ನು ಸ್ಫೋಟಿಸಿದ್ದು, ಘಟನೆಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಸಂಜೆ 4 ಗಂಟೆಯ ಸುಮಾರಿಗೆ ಬಿಜಾಪುರ್ ಜಿಲ್ಲೆಯ ಮುರ್ದಂದ್ ಸಿಆರ್ ಪಿಎಫ್ ಕ್ಯಾಂಪ್ ಸಮೀಪ ಈ ಘಟನೆ ನಡೆದಿದೆ ಎಂದು ಬಿಜಾಪುರ್ ಪೊಲೀಸ್ ಅಧೀಕ್ಷಕ ಮೋಹಿತ್ ಗರ್ಗ್ ಅವರು ಹೇಳಿದ್ದಾರೆ.
ಕ್ಯಾಂಪ್ ನಿಂದ 1 ಕಿ.ಮೀ.ದೂರದಲ್ಲಿ ಸಿಆರ್ ಪಿಎಫ್ ನ 6 ಸಿಬ್ಬಂದಿ ತೆರಳುತ್ತಿದ್ದ ಎಂಪಿವಿ(ಸ್ಫೋಟ ನಿರೋಧಕ ವಾಹನ) ವಾಹನವನ್ನು ಪ್ರಬಲ ನೆಲಬಾಂಬ್ ಬಳಸಿ ಸ್ಫೋಟಿಸಿಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಸಹ ಸ್ಥಳದಿಂದ ತೆರವುಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Comments are closed.