ಕರ್ನಾಟಕ

ಕೌಟುಂಬಿಕ ಕಲಹಕ್ಕೆ ಬೇಸತ್ತು ನದಿಗೆ ಹಾರಿ ನವದಂಪತಿ ಆತ್ಮಹತ್ಯೆ! ​

Pinterest LinkedIn Tumblr


ಬಾಗಲಕೋಟೆ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ನದಿಗೆ ಹಾರಿ ನವದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಸಾವಿಗೆ ಸಾವೇ ಕಾರಣ ಎಂದು ಬರೆದಿರುವ ಡೆತ್​ನೋಟ್​ ಪತ್ತೆಯಾಗಿದೆ.

ಘಟಪ್ರಭಾ ನದಿಯ ಸೇತುವೆ ಬಳಿ ಡೆತ್ ನೋಟ್ ಪತ್ತೆಯಾಗಿದೆ. ಅಪ್ಪಾ ನಮ್ಮನ್ನು ಕ್ಷಮಿಸು. ನಮ್ಮ ಸಾವಿಗೆ ನಾವೇ ಕಾರಣ. ದಯಮಾಡಿ ನಮ್ಮಿಬ್ಬರನ್ನು ಒಟ್ಟಿಗೆ ಸಂಸ್ಕಾರ ಮಾಡಿ ಎಂದು ಡೆತ್​ನೋಡ್​ನಲ್ಲಿ ಉಲ್ಲೇಖಿಸಲಾಗಿದೆ. ಕೊನೆಯಲ್ಲಿ ಮೌನೇಶ್ ಕಮ್ಮಾರ ಎಂದು ಸಹಿ ಮಾಡಲಾಗಿದೆ.

ದಾಂಪತ್ಯದಲ್ಲಿ ಸಾಮರಸ್ಯದ ಕೊರತೆಯಿಂದಾಗಿ ನಿತ್ಯವೂ ಆಗುತ್ತಿದ್ದ ಜಗಳದಿಂದ ಬೇಸತ್ತು ಬಾಗಲಕೋಟೆ ಜಿಲ್ಲೆ ರಾಮದುರ್ಗ ತಾಲೂಕಿನ ಕಮಗೇರಿ ನಿವಾಸಿಗಳಾದ ಮೌನೇಶ್​ ಕಮ್ಮಾರ (28) ಮತ್ತು ಅಕ್ಷತಾ (20) ನವದಂಪತಿ ಘಟಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮುಧೋಳ ತಾಲೂಕಿನ ಚಿಂಚಖಂಡಿ ಕೆಡಿ ಗ್ರಾಮದ ಬಳಿಯಿರುವ ಘಟಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹಗಳಿಗಾಗಿ ನದಿಯಲ್ಲಿ ಶೋಧಕಾರ್ಯ ಮುಂದುವರಿದಿದೆ.

Comments are closed.