ಕುಂದಾಪುರ: ಬೆಂಗಳೂರು ಗ್ರಾಮಾಂತರ ಸಂಸದ ಕಾಂಗ್ರೆಸ್ ನಾಯಕರಾಗಿರುವ ಡಿ.ಕೆ.ಸುರೇಶ್ ಕರಾವಳಿಯಲ್ಲಿ ಕಾಣಿಸಿಕೊಂಡಿದ್ದಾರೆ. ತಮ್ಮ ಆತ್ಮೀಯರಾದ ಕುಂದಾಪುರ ಕಾಂಗ್ರೆಸ್ ನ ಹಿರಿಯ ಮುಖಂಡ ಬೀಜಾಡಿ ಅಶೋಕ್ ಪೂಜಾರಿಯವರು ಮನೆಗೆ ಭೇಟಿ ನೀಡಿದರು.
ಈ ಸಂದರ್ಭ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್, ಕುಂದಾಪುರ ಬ್ಲಾಕ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಶರತ್ ಹೆಗ್ಡೆ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಮೇಶ್ ಶೆಟ್ಟಿ ವಕ್ವಾಡಿ ಮತ್ತು ಅಭಿಷೇಕ್ ಪೂಜಾರಿ, ಪುರಸಭಾ ಸದಸ್ಯ ಚಂದ್ರಶೇಖರ ಖಾರ್ವಿ, ಮುಖಂಡರಾದ ಅಣ್ಣಯ್ಯ ಪುತ್ರನ್, ಶೇಖರ್ ಕಾಂಚನ್, ಕೋಡಿ ಸುನಿಲ್ ಪೂಜಾರಿ, ಮತ್ತಿತರ ಸ್ಥಳೀಯ ಕಾಂಗ್ರೇಸ್ ಮುಖಂಡರು ಉಪಸ್ಥಿತರಿದ್ದರು.
ಅಶೋಕ್ ಪೂಜಾರಿ ಇವರ ಮನೆಯಲ್ಲಿ ಬೆಳಗಿನ ಉಪಾಹಾರ ಮುಗಿಸಿ , ಸ್ಥಳೀಯ ರಾಜಕೀಯದ ಮಾಹಿತಿಯನ್ನ ಪಡೆದರು. ಖಾಸಗಿ ಭೇಟಿಯಾದ್ದರಿಂದ ಮಾಧ್ಯಮಕ್ಕೆ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದರು.
Comments are closed.