ಕರ್ನಾಟಕ

ಬಿಸಿಲಿನ ಝಳಕ್ಕೆ ಕೊರೊನಾ ವೈರಸ್ ಹರಡುತ್ತಾ..?

Pinterest LinkedIn Tumblr


ಬೆಂಗಳೂರು: ವಿಧಾನಸೌಧದಲ್ಲಿ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ರಾಜ್ಯದಲ್ಲಿ ಕೊರೋನ ಬಗ್ಗೆ ಭಯಭೀತರಾಗೋದು ಬೇಡ. ಸರ್ಕಾರ ಈ ಬಗ್ಗೆ ಸಾಕಷ್ಟು ಮುಂಜಾಗೃತ ಕ್ರಮಗಳನ್ನ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಅಲ್ಲದೇ, ನಿನ್ನೆ ಅಮೆರಿಕಾದಿಂದ ಬಂದಿರುವ ವ್ಯಕ್ತಿಗೆ ವೈರಸ್ ಧೃಡಪಟ್ಟಿದೆ. ಅವರ ಕುಟುಂಬಸ್ಥರು, ಟ್ಯಾಕ್ಸಿ ಚಾಲಕರು ಎಲ್ಲರನ್ನೂ ಪರಿಶೀಲನೆ ಮಾಡಲಾಗುತ್ತಿದೆ. ಹಣಕಾಸಿನ ಕೊರತೆ ಇಲ್ಲ. ಎಲ್ಲಾ ಮುಂಜಾಗೃತ ಕ್ರಮಗಳನ್ನ ಕೈಗೊಳ್ಳಲಾಗಿದೆ. ನಮ್ಮಲ್ಲಿನ ಬಿಸಿಲಿನ ತಾಪಕ್ಕೆ ಈ ವೈರಸ್ ಹರಡುವುದಿಲ್ಲ. ಈಗಾಗಲೇ ಎಲ್ಲಾ ಕಡೆ ಮಾಹಿತಿ ನೀಡುವ ಕೆಲಸ ಮಾಡುತ್ತಿದ್ದೇವೆ.

ವೆನ್ಲಾಕ್ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದವರನ್ನ ಕರೆ ತರಲಾಗಿದೆ. ಅವರಿಗೆ ಮತ್ತೆ ಚಿಕಿತ್ಸೆ ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ. ಅಧಿಕ ಮೌಲ್ಯಕ್ಕೆ ಮಾಸ್ಕ್ ಮಾರದಂತೆ ಈ ಕುರಿತು ಡಿಹೆಚ್ಓ ಮತ್ತು ಆಫೀಸರ್ಗೆ ಸಹ ನಿಗಾ ವಹಿಸುವಂತೆ ತಿಳಿಸಲಾಗಿದೆ.

Comments are closed.