ಕರ್ನಾಟಕ

ಕೊರೋನಾ ನಿಯಂತ್ರಣಕ್ಕೆ ಬಂದರೆ ಮಾತ್ರ ಎಸ್.ಎಸ್.ಎಲ್.ಸಿ ಪರೀಕ್ಷೆ: ಸಿಎಂ‌ ಬಿ.ಎಸ್. ಯಡಿಯೂರಪ್ಪ

Pinterest LinkedIn Tumblr

ಬೆಳಗಾವಿ: ಕೊರೋನಾ ನಿಯಂತ್ರಣಕ್ಕೆ ಬಂದರೆ ಮಾತ್ರ ಎಸ್.ಎಸ್.ಎಲ್.ಸಿ ಪರೀಕ್ಷೆ ಇಲ್ಲವಾದರೆ ಪರೀಕ್ಷೆ ನಡೆಸಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸುವುದೇ ಅಂತಿಮ ತೀರ್ಮಾನವಲ್ಲ. ಪರೀಕ್ಷೆ ನಡೆಸುವ ಸಮಯದಲ್ಲಿ ಕೊರೋನಾ 3ನೇ ಅಲೆ ಬಂದರೆ ಆಗಲೂ ಆ ತಕ್ಷಣಕ್ಕೆ ನಿರ್ಧಾರ ಮರುಪರಿಶೀಲಿಸುತ್ತೇವೆ. ಪರೀಕ್ಷೆ ನಡೆಸಬೇಕಾ, ಬೇಡವಾ ಎಂದು ನಿರ್ಧರಿಸುತ್ತೇವೆ ಎಂದಿದ್ದಾರೆ.

ವಿದ್ಯಾರ್ಥಿಗಳಿಗೆ ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಹೇಳಿದ ಬೆನ್ನಿಗೇ ಮುಖ್ಯಮಂತ್ರಿ ಯಡಿಯೂರಪ್ಪ ಈ ಪ್ರತಿಕ್ರಿಯೆ ನೀಡಿದ್ದಾರೆ.

 

 

Comments are closed.