ಉಡುಪಿ: ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಸುಳ್ಳು ಸುದ್ದಿ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ. ಹಾಕೆ ಸ್ಪಷ್ಟನೆ ನೀಡಿದ್ದಾರೆ.
ಮಕ್ಕಳ ಕಳ್ಳರಿದ್ದಾರೆಂಬ ಸುಳ್ಳು ಸುದ್ದಿಗೆ ಸಂಬಂಧಿಸಿದಂತೆ ಬೇರೆ ಬೇರೆ ದೇಶದ/ರಾಜ್ಯದ ವಿಡಿಯೋಗಳನ್ನು ಪ್ರಕಟಿಸಲಾಗುತ್ತಿದೆ. ಇದರಿಂದ ಆತಂಕಗೊಂಡ ಸಾರ್ವಜನಿಕರು ಅಪರಿಚಿತ ಅಮಾಯಕ ವ್ಯಕ್ತಿಗಳನ್ನು ತಡೆದು ಹಲ್ಲೆ ಮಾಡುವ ಘಟನೆಗಳು ಬೆಳಕಿಗೆ ಬಂದಿದೆ.
ಸಾರ್ವಜನಿಕರಿಗೆ ಈ ಮೂಲಕ ತಿಳಿಸುವುದೇನೆಂದರೆ, ತಮ್ಮ ನಗರ, ಗ್ರಾಮ, ಮತ್ತು ಸುತ್ತುಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡುವುದು, ಇದರಿಂದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಬಂದು ಕೂಲಂಕುಶವಾಗಿ ವಿಚಾರಣೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ.
ಮಕ್ಕಳ ಕಳ್ಳತನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದೆಂದು ಎಂದು ಎಸ್ಪಿ ಎಚ್ಚರಿಕೆ ನೀಡಿದ್ದಾರೆ.
Comments are closed.