ಪ್ರಮುಖ ವರದಿಗಳು

ಎನ್‌ಡಿಎ ಜೊತೆಗೆ ನಿಲ್ಲುತ್ತೇವೆ, ದಿಲ್ಲಿಯ ಸಭೆಗೆ ಹೋಗುತ್ತೇವೆ: ಬೆಂಬಲದ ಬಗ್ಗೆ ಚಂದ್ರಬಾಬು ನಾಯ್ಡು ಸ್ಪಷ್ಟನೆ

Pinterest LinkedIn Tumblr

ನವದೆಹಲಿ: ಟಿಡಿಪಿ ಮುಖ್ಯಸ್ಥ ಎನ್‌ ಚಂದ್ರಬಾಬು ನಾಯ್ಡು ಅವರು ಬಿಜೆಪಿ ನೇತೃತ್ವದ ಎನ್‌ಡಿಎಗೆ ತಮ್ಮ ಬೆಂಬಲವನ್ನು ಪುನರುಚ್ಛರಿಸಿದ್ದಾರೆ ಹಾಗೂ ಕೇಂದ್ರದಲ್ಲಿ ಹೊಸ ಸರ್ಕಾರ ರಚಿಸಲು ತಮ್ಮ ಪಕ್ಷ ಬಿಜೆಪಿಯನ್ನು ಬೆಂಬಲಿಸಲಿದೆ ಎಂದು ಹೇಳಿದ್ದಾರೆ.

“ನಾನು ದಿಲ್ಲಿಗೆ ಹೋಗುತ್ತಿದ್ದೇನೆ. ಮತದಾರರ ಬೆಂಬಲ ಖುಷಿ ನೀಡಿದೆ. ರಾಜಕಾರಣದಲ್ಲಿ ಏಳು ಬೀಳುಗಳು ಸಹಜ. ಇದೊಂದು ಐತಿಹಾಸಿಕ ಚುನಾವಣೆ. ಟಿಡಿಪಿ ಇಂದು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪಕ್ಷ ಕಾರ್ಯಕರ್ತರ ಅಪಾರ ಶ್ರಮವಿದೆ. ಪ್ರಜಾಪ್ರಭುತ್ವ ರಕ್ಷಣೆಗಾಗಿ ಐದು ವರ್ಷ ಹೋರಾಡಿದೆವು. ಇಂದು ಯಶಸ್ವಿಯಾಗಿದ್ದೇವೆ,” ಎಂದು ಅವರು ಹೇಳಿದರು.

ಚುನಾವಣಾ ಫಲಿತಾಂಶ ಘೋಷಣೆಯ ನಂತರ ಬಿಜೆಪಿಗೆ ‌ಸ್ಪಷ್ಟ ಬಹುಮತ ದೊರೆಯದೆ ಇರುವುದರಿಂದ ಮೈತ್ರಿಪಕ್ಷಗಳಾದ ಟಿಡಿಪಿ ಹಾಗೂ ಜೆಡಿಯು ನೆರವಿನೊಂದಿಗೆ ಸರಕಾರ ರಚಿಸಬೇಕಾದ ಅನಿವಾರ್ಯತೆಯಿದೆ. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟವಾದ ಐ.ಎನ್.ಡಿ.ಐ.ಎ, ಈ ಎರಡು ಪಕ್ಷಗಳ ನಾಯಕರಾದ ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ಅವರನ್ನು ತನ್ನತ್ತ ಸೆಳೆಯಲು ನಿನ್ನೆಯಿಂದಲೇ ಕಸರತ್ತು ಪ್ರಾರಂಭಿಸಿತ್ತು.

ಆದರೇ ಇದೀಗಾ ಚಂದ್ರಬಾಬು ನಾಯ್ಡು ನೀಡಿರುವ ಈ ಹೇಳಿಕೆಯು ಮಹತ್ವ ರಾಜಕೀಯ ವಲಯದಲ್ಲಿ ಪಡೆದುಕೊಂಡಿದ್ದು, ಮತ್ತೊಬ್ಬ ಎನ್.ಡಿ.ಎ ನಾಯಕರಾದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಇಂದು ಯಾವ ನಿರ್ಧಾರ ಪ್ರಕಟಿಸಬಹುದು ಎಂಬುದರ ಮೇಲೆ ಎನ್.ಡಿ.ಎ ಸರಕಾರ ರಚನೆಯ ಸಾಧ್ಯತೆ ಅವಲಂಬಿತವಾಗಿದೆ ಎಂದು ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ.

 

Comments are closed.