ನವದೆಹಲಿ: ಭಾರಿ ಕುತೂಹಲ ಹಾಗೂ ನಿರೀಕ್ಷೆ ಮೂಡಿಸಿದ ಕೇಂದ್ರ ಬಜೆಟ್ ಮಂಡನೆಯಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಬಜೆಟ್ ಮಂಡಿಸಿದ್ದಾರೆ. ಇದೀಗ ಎಲ್ಲೆಡೆ ತೆರಿಗೆ ವಿನಾಯಿತಿ ಕುರಿತು ಚರ್ಚೆಗಳು ನಡೆಯುತ್ತಿದೆ. ಬಜೆಟ್ ಮಂಡನೆ ಬಳಿಕ ದೇಶದ ತೆರಿಗೆ ನೀತಿ, ಸೇರಿದಂತೆ ಕೆಲ ಕ್ಷೇತ್ರದಲ್ಲಿ ಪ್ರಮುಖ ಬದಲಾವಣೆಯಾಗುತ್ತಿದೆ. ಆದಾಯ ತೆರಿಗೆ ವಿನಾಯಿತಿ, ಟಿಡಿಎಸ್ ಹಾಗೂ ಸ್ಟಾರ್ಟ್ಅಪ್ ಬೂಸ್ಟರ್, ಆರೋಗ್ಯ, ಶಿಕ್ಷಣ ಸೇರಿದಂತೆ ಕೆಲ ಪ್ರಮುಖ ಕ್ಷೇತ್ರಗಳಲ್ಲಿ ಬದಲಾವಣೆಯಾಗ್ತಿದೆ.
ಆದಾಯ ತೆರಿಗೆ ವಿನಾಯಿತಿ
ಹೊಸ ಆದಾಯ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. 7 ಲಕ್ಷ ರೂಪಾಯಿ ವರೆಗಿದ್ದ ತೆರಿಗೆ ವಿನಾಯಿಯನ್ನು 12 ಲಕ್ಷ ರೂಪಾಯಿ ವರೆಗೆ ಏರಿಕೆ ಮಾಡಲಾಗಿದೆ. ಇದರಿಂದ 12 ಲಕ್ಷ ರೂಪಾಯಿ ವರೆಗೆ ಆದಾಯ ಇರುವ ತೆರಿಗೆದಾರರು ಯಾವುದೇ ತೆರಿಗೆ ಪಾವತಿ ಮಾಡಬೇಕಿಲ್ಲ. ವಿಶೇಷ ಅಂದರೆ 12.75 ಲಕ್ಷ ರೂಪಾಯಿ ವರೆಗಿನ ವೇತನದಾರರಿಗೆ 75,000 ರೂಪಾಯಿ ಸ್ಟಾಂಡರ್ಡ್ ಡಿಡಕ್ಷನ್ ನೀಡಲಾಗಿದೆ. ಹೀಗಾಗಿ 12.75 ಲಕ್ಷ ರೂಪಾಯಿ ವರೆಗಿನ ವೇತನದಾರರು ತೆರಿಗೆ ವಿನಾಯಿತಿ ಲಾಭ ಪಡೆಯಲಿದ್ದಾರೆ.
ಟಿಡಿಎಸ್, ಟಿಸಿಎಸ್ ನೀತಿ ಬದಲಾವಣೆ:
ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ಆದಾಯ ತೆರಿಗೆ ಸುಧಾರಣೆಗಳನ್ನು ತರಲಾಗಿದೆ. ಈ ಮೂಲಕ ತೆರಿಗೆದಾರರ ಮೇಲಿನ ಹೊರೆ ಕಡಿಮೆ ಮಾಡಲು ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಪ್ರಮುಖವಾಗಿ ಆದಾಯ ಮೂಲದಲ್ಲಿ ಕಡಿತಗೊಳಿಸುವ ಟಿಡಿಎಸ್ ತರ್ಕಬದ್ಧಗೊಳಿಲಾಗಿದೆ. ಟಿಸಿಎಸ್ ಮಿತಿಯನ್ನು 7 ಲಕ್ಷ ರೂಪಾಯಿಯಿಂದ 10 ಲಕ್ಷ ರೂಪಾಯಿ ವರೆಗೆ ಹೆಚ್ಚಿಸಲಾಗಿದೆ. ಇನ್ನು ಬಾಡಿಗೆ ಮೇಲಿನ ಟಿಡಿಎಸ್ ಮಿತಿಯನ್ನು 6 ಲಕ್ಷ ರೂಪಾಯಿ ವರೆಗೆ ಏರಿಕೆ ಮಾಡಲಾಗಿದೆ. ಇದರಿಂದ ಮಧ್ಯಮ ವರ್ಗ ನಿಟ್ಟುಸಿರು ಬಿಟ್ಟಿದ್ದಾರೆ. ಶಿಕ್ಷಣ ಸಾಲದ ಮೇಲಿನ ಟಿಸಿಎಸ್ ಮಿತಿಯನ್ನು 10 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಮತ್ತೊಂದು ಪ್ರಮುಖ ಬದಲಾವಣೆ ಎಂದರೆ ಟಿಸಿಎಸ್ ಪಾವತಿ ವಿಳಂಭವನ್ನು ಅಪರಾಧ ಎಂದು ಪರಿಗಣಿಸುವ ನೀತಿಗೆ ಬ್ರೇಕ್ ಹಾಕಲಾಗಿದೆ. ಇದೀಗ ಟಿಸಿಎಸ್ ಪಾವತಿಯನ್ನು ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ.
ಆರೋಗ್ಯ ಕ್ಷೇತ್ರದಲ್ಲಿ ಕೆಲ ಮಹತ್ವದ ಬದಲಾವಣೆ ಮಾಡಲಾಗಿದೆ. ಜೀವ ಉಳಿಸುವ 36 ಔಷಧಗಳ ಮೇಲಿನ ಸುಂಕವನ್ನು ಸಂಪೂರ್ಣ ಕಡಿತಗೊಳಿಸಲಾಗಿದೆ. ಸಮಾಜ ಕಲ್ಯಾಣಗಳ ಸರ್ಚಾರ್ಜ್ ಮೇಲೆ ಸದ್ಯ 82 ಟ್ಯಾರಿಫ್ ಲೈನ್ಸ್ ಅಡಿಯಲ್ಲಿ ಸುಂಕ ವಿನಾಯಿತಿ ನೀಡಲಾಗುತ್ತದೆ.
Comments are closed.