ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮೊವಾಡಿ ಬಳಿಯಲ್ಲಿ ಬೈಕೊಂದು ನಿಯಂತ್ರಣ ತಪ್ಪಿ ಕಂಪೌಂಡ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತ ದುರ್ದೈವಿಯನ್ನು ಮೊವಾಡಿ ನಿವಾಸಿ ಕೃಷ್ಣ ಮೊಗವೀರ ಇವರ ಪುತ್ರನಾದ ನಿತಿನ್ ಮೊಗವೀರ (26) ಎಂದು ಗುರುತಿಸಲಾಗಿದೆ.
ಮೊವಾಡಿ ನಿವಾಸಿಯಾದ ಕೃಷ್ಣ ಮೊಗವೀರ ಇವರ ಪುತ್ರನಾದ ನಿತಿನ್ ಎಂಬವರು ರಾತ್ರಿ 8 ಗಂಟೆಯ ಸುಮಾರಿಗೆ ತನ್ನ ತಂಗಿಯನ್ನು ಬೈಕಿನಲ್ಲಿ ಕುಂದಾಪುರದ ಬಸ್ ಸ್ಟ್ಯಾಂಡ್ಗೆ ಬಿಟ್ಟು ಮನೆಗೆ ಮನೆಗೆ ವಾಪಾಸ್ಸಾಗುವಾಗ ಈ ದುರ್ಘಟನೆ ಸಂಭವಿಸಿದೆ.
ಈ ಕುರಿತು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.