ಕುಂದಾಪುರ: ಪ್ರಸಿದ್ಧ ಕೊಲ್ಲೂರಿನ ಶ್ರೀ ಮೂಕಾಂಬಿಕ ದೇವಳದಲ್ಲಿ ನವರಾತ್ರಿ ಸಂಭ್ರಮ ಜೋರಾಗಿದೆ. ನಿತ್ಯ ಧಾರ್ಮಿಕ ಹಾಗೂ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳು ದೇವಳದಲ್ಲಿ ನಡೆಯುತ್ತಿದೆ. ನವರಾತ್ರಿ ಪ್ರಯುಕ್ತ ರಾಜ್ಯ ಹಾಗೂ ಹೊರರಾಜ್ಯದ ಭಕ್ತರ ದಂಡು ದೇವಳಕ್ಕೆ ಆಗಮಿಸುತ್ತಿದ್ದು ಶ್ರೀ ದೇವಿ ಸನ್ನಿಧಿಯಲ್ಲಿ ಭಕ್ತ ಸಾಗರವೇ ನಿರ್ಮಾಣಗೊಂಡಿದೆ.
ದೇಗುಲಕ್ಕೆ ಆಗಮಿಸುವ ಭಕ್ತರ ವಾಸ್ತವ್ಯಕ್ಕೆ ಸಂಪೂರ್ಣ ವ್ಯವಸ್ಥೆಯನ್ನು ಏರ್ಪಡಿಸಲಾಗಿದ್ದು ಯಾವುದೇ ಕೊರತೆಯಾಗದಂತೆ ನಿಗಾ ವಹಿಸಲಾಗಿದೆ ಎಂದು ದೇವಳದ ಆಡಳಿತ ಧರ್ಮದರ್ಶಿ ಕೃಷ್ಣಪ್ರಸಾದ ಅಡ್ಯಂತಾಯ ಹಾಗೂ ಕಾರ್ಯನಿರ್ವಹಣಾಧಿಕಾರಿ ವಿ. ಪ್ರಸನ್ನ ಅವರು ತಿಳಿಸಿದ್ದಾರೆ.