ಮಂಗಳೂರು : ಡಿ.15 : ಕಲ್ಕೂರ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಮಲ್ಪೆ ಶಂಕರ ನಾರಾಯಣ ಸಾಮಗ ಪ್ರಶಸ್ತಿಯನ್ನು ಹರಿದಾಸ ಮಹಾಬಲ ಶೆಟ್ಟಿ (ದೇವಕಿತನಯ) ಅವರಿಗೆ ಪ್ರದಾನ ಮಾಡಲಾಯಿತು.ಯಕ್ಷಗಾನ ಬಯಲಾಟ ಅಕಾಡೆಮಿ ಮಾಜಿ ಅಧ್ಯಕ್ಷ ಕುಂಬ್ಳೆ ಸುಂದರರಾವ್ ಉದ್ಘಾಟಿಸಿದರು.
ಹಿರಿಯ ವಿದ್ವಾಂಸ ಡಾ| ಎಂ. ಪ್ರಭಾಕರ ಜೋಶಿ ಸಂಸ್ಮರಣೆ ಗೈದರು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಅಧ್ಯಕ್ಷತೆ ವಹಿಸಿದ್ದರು.
ಯಕ್ಷಗಾನ ಬಯಲಾಟ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ. ಎಂ.ಎಲ್. ಸಾಮಗ ಅಭಿನಂದನಾ ನುಡಿಗಳನ್ನಾಡಿದರು. ಕರ್ಣಾಟಕ ಬ್ಯಾಂಕ್ನ ನಿವೃತ್ತ ಮಹಾ ಪ್ರಬಂಧಕ ಪಿ. ಜಯರಾಮ ಹಂದೆ ಮುಖ್ಯ ಅತಿಥಿಗಳಾಗಿದ್ದರು.