ಉಡುಪಿ: ವರ್ಗಾವಣೆ ಬಗ್ಗೆ ಯಾವುದೇ ಊಹಾಪೋಹ, ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಈ ವಿಷಯದ ಸಂಬಂಧ ಸಾರ್ವಜನಿಕರು ಮತ್ತು ಸಂಘಟನೆಗಳು ಯಾವುದೇ ರೀತಿಯ ಪ್ರತಿಭಟನೆ ಮಾಡದಂತೆ ಉಡುಪಿ ಜಿಲ್ಲಾ ಎಸ್ಪಿ ಅಣ್ಣಾಮಲೈ ಕೆ. ವಿನಂತಿ ಮಾಡಿಕೊಂಡಿದ್ದಾರೆ.
ವರ್ಗಾವಣೆಯ ಕುರಿತು ಪತ್ರಿಕಾ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಯನ್ನು ಗಮನಿಸಿದ ಎಸ್ಪಿಯವರು ಈ ಪ್ರತಿಕ್ರಿಯೆ ನೀಡಿ ದ್ದಾರೆ. ವರ್ಗಾವಣೆ ಸರಕಾರದ ಆದೇಶದಂತೆ ನಡೆಯುವ ಪ್ರಕ್ರಿಯೆಯಾಗಿದ್ದು, ಇದರ ಬಗ್ಗೆ ಸಾರ್ವಜನಿಕರು ಯಾವುದೇ ಊಹಾಪೋಹ, ವದಂತಿಗಳಿಗೆ ಕಿವಿಗೊಟ್ಟು ಪ್ರತಿಭಟಿಸಬಾರದು ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.