ಕನ್ನಡ ವಾರ್ತೆಗಳು

ಮಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯರಾಗಿ ಶ್ರೀ ಹರೀಶ್ ಆಚಾರ್ ನೇಮಕ

Pinterest LinkedIn Tumblr

harish_new_syndicate_unvers

ಮಂಗಳೂರು,ಡಿ.17 : ಮಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್‌ಗೆ ಮಾನ್ಯ ರಾಜ್ಯಪಾಲರ ಪ್ರತಿನಿಧಿಯಾಗಿ ಶ್ರೀ ಹರೀಶ್ ಆಚಾರ್‌ರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

ಈ ಹಿಂದೆ ಒಂದು ಅವಧಿಗೆ ಕರ್ನಾಟಕ ರಾಜ್ಯ ಸರಕಾರ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿರುವ ಶ್ರೀ ಹರೀಶ್ ಆಚಾರ್ ಅವರು ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್, ಮಂಗಳೂರು ಇದರ ಅಧ್ಯಕ್ಷರಾಗಿ, ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿಮಿಟೆಡ್ ಮಂಗಳೂರು ಇದರ ಅಧ್ಯಕ್ಷರಾಗಿಯೂ ಸಹಕಾರ ಭಾರತಿ ಕರ್ನಾಟಕ ಇದರ ರಾಜ್ಯ ಸಹ ಸಂಘಟನ ಪ್ರಮುಖರಾಗಿಯೂ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ವಿವಿಧ ಸಾಮಾಜಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಇವರು ಈ ಹಿಂದೆ ಜಿಲ್ಲೆಯ ವಿವಿಧ ಶೈಕ್ಷಣಿಕ ಆಂದೋಲನಗಳ ನೇತ್ರತ್ವವನ್ನು ವಹಿಸಿಕೊಂಡಿರುತ್ತಾರೆ.

Write A Comment