ಮಂಗಳೂರು,ಡಿ,19: ಕಲ್ಕೂರ ಪ್ರತಿಷ್ಠಾನ (ರಿ) ಮಂಗಳೂರು ಇವರಿಂದ ಬಡಗುತಿಟ್ಟು ಯಕ್ಷಗಾನ ಕಲಾವಿದ ಕೊಂಡದಕುಳಿ ರಾಮಚಂದ್ರ ಹೆಗಡೆ ಅವರಿಗೆ ಡಾನ್ಬಾಸ್ಕೋ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ‘ಕಲ್ಕೂರ ಯಕ್ಷಸಿರಿ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ, ಯಕ್ಷಗಾನ ಬಯಲಾಟ ಅಕಾಡೆಮಿ ಮಾಜಿ ಅಧ್ಯಕ್ಷರುಗಳಾದ ಕುಂಬ್ಳೆ ಸುಂದರ ರಾವ್, ಎಂ.ಎಲ್. ಸಾಮಗ, ಕರ್ಣಾಟಕ ಬ್ಯಾಂಕಿನ ನಿವೃತ್ತ ಮಹಾಪ್ರಬಂಧಕ ಜಯರಾಮ ಹಂದೆ, ಡಾ. ಎಂ. ಪ್ರಭಾಕರ ಜೋಶಿ, ಶ್ರೀಮತಿ ವಿಜಯಲಕ್ಷ್ಮೀ ಬಿ. ಶೆಟ್ಟಿ, ಜಿ.ಕೆ. ಭಟ್ ಸೆರಾಜೆ, ಮಹಾಬಲ ಶೆಟ್ಟಿ, ಜನಾರ್ದನ ಹಂದೆ, ಸುಧಾಕರ ರಾವ್ ಪೇಜಾವರ, ಶ್ರೀರಾಮ್ ಮೊದಲಾದವರು ಉಪಸ್ಥಿತರಿದ್ದರು.