ಕನ್ನಡ ವಾರ್ತೆಗಳು

ಬೈಕಿಗೆ ಕಾರು ಪರಸ್ಪರ ಡಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Pinterest LinkedIn Tumblr

bai_car_acdent

ವಿಟ್ಲ, ಡಿ.25 :ಕಾರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸಹಸವಾರ ಗಂಭೀರ ಗಾಯಗೊಂಡ ಘಟನೆ ಬೋಳಂತೂರು ಗ್ರಾಮದ ಕಲ್ಪಣೆ ಎಂಬಲ್ಲಿ ಗುರುವಾರ ನಡೆದಿದೆ.

ಸುರಿಬೈಲ್ ಶಾಲೆಯೊಂದರ 9 ನೇ ತರಗತಿ ವಿದ್ಯಾರ್ಥಿ ಮಹಮ್ಮದ್ ಆಸೀಂ(15) ಗಾಯಾಳುವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈತ ಗುರುವಾರ ಸ್ನೇಹಿತನ ಜತೆ ಬೈಕಿನಲ್ಲಿ ಎನ್.ಸಿ ರೋಡ್‌ಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಕಡೆಯಿಂದ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿ ಕಾರಿನ ಮೇಲ್ಭಾಗಕ್ಕೆ ಅಪ್ಪಳಿಸಿ ಮತ್ತೆ ರಸ್ತೆಗೆ ಉರುಳಿ ಬಿದ್ದಿದ್ದಾನೆ. ಸ್ಥಳೀಯರು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆಯಲ್ಲಿ ಬೈಕ್ ಸಂಪೂರ್ಣವಾಗಿ ಹಾನಿಗೊಂಡಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ.

ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Write A Comment