ಮಂಗಳೂರು, ಡಿ. 27: ಮೂಡುಬಿದಿರೆ ಪ್ರಶಾಂತ್ ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳನ್ನು ಬಂಧಿಸುವಂತೆ ದ.ಕ.ಜಿಲ್ಲಾ ಮುಸ್ಲಿಮ್ ಸಂಘಟನೆಗಳ ಒಕ್ಕೂಟವು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ, ಮಾಜಿ ಮೇಯರ್ ಕೆ.ಅಶ್ರಫ್ ಅವರು, ಪ್ರಕರಣಕ್ಕೆ ಸಂಬಂಧಿಸಿ 17 ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಂಟ್ವಾಳದಲ್ಲಿ ನಡೆದ ಹರೀಶ್ ಪೂಜಾರಿ ಕೊಲೆ ಪ್ರಕರಣದಲ್ಲಿಯೂ ಮೂರು ಮಂದಿಯನ್ನು ಬಂಧಿಸಿ ನಂತರ ಇಲಾಖೆ ಕೈಕಟ್ಟಿ ಕುಳಿತಿದೆ. ಈ ಪ್ರಕರಣಗಳಲ್ಲಿ ನೈಜ ಆರೋಪಿಗಳನ್ನು ಪೊಲೀಸರು ಬಂಧಿಸಬೇಕು. ತಪ್ಪಿದಲ್ಲಿ ಹೋರಾಟ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಪದಾಕಾರಿಗಳಾದ ಹನೀಫ್ ಕಾಟಿಪಳ್ಳ, ನವಾಝ್ ಉಳ್ಳಾಲ, ಹಮೀದ್ ಕುದ್ರೋಳಿ, ಯು.ಎನ್.ಬಾವಾ, ಸಿ.ಎಂ.ಮುಸ್ತ ಮತ್ತಿತರರು ಉಪಸ್ಥಿತರಿದ್ದರು.