ಕನ್ನಡ ವಾರ್ತೆಗಳು

ಜ.12: ರಾಜ್ಯಾದ್ಯಂತ ವಿವೇಕ್ ಬ್ಯಾಂಡ್ ಅಭಿಯಾನ.

Pinterest LinkedIn Tumblr

vivek_nada_band

ಮಂಗಳೂರು,ಜ.04: ಯುವಜನರಲ್ಲಿ ಸಾಮಾಜಿಕ ಸೇವಾ ಪ್ರಜ್ಞೆಯನ್ನು ಪೋಷಿಸುವ `ಉತ್ತಮನಾಗು-ಉಪಕಾರಿಯಾಗು’ ಎಂಬ ಸ್ವಾಮಿ ವಿವೇಕಾನಂದರ ಜೀವನ ಸಂದೇಶವನ್ನು ಸಾರುವ ಬೃಹತ್ ಯುವ ಅಭಿಯಾನ `ವಿವೇಕ್ ಬ್ಯಾಂಡ್-2016′ ಇದೇ ಬರುವ ಜನವರಿ 12 ರಿಂದ 26ರವರೆಗೆ ರಾಜ್ಯಾದ್ಯಂತ ನಡೆಯಲಿದೆ.

ಜನವರಿ 12,2016 ರಂದು ಸ್ವಾಮಿ ವಿವೇಕಾನಂದರ 153 ನೇ ಜಯಂತಿ ಮತ್ತು ರಾಷ್ಟೀಯ ಯುವ ದಿನದ ಅಂಗವಾಗಿ ರಾಜ್ಯದಾದ್ಯಂತ ವಿವೇಕ್ ಬ್ಯಾಂಡ್ ಅಭಿಯಾನಕ್ಕೆ ಚಾಲನೆ ದೊರೆಯಲಿದೆ. ಯುವಕ- ಯುವತಿಯರು ತಮ್ಮ ಬಲಗೈಗೆ ವಿವೇಕ್‌ಬ್ಯಾಂಡ್‌ನ್ನು ಧರಿಸಲಿದ್ದು, ವಿವೇಕಾನಂದರು ಯುವಜನರಿಗೆ ನೀಡಿದ `ಉತ್ತಮನಾಗು-ಉಪಕಾರಿಯಾಗು’ ( Be good – Do good) ಎಂಬ ಸಂದೇಶವನ್ನು ತಾವು ಪಾಲನೆ ಮಾಡುವ ಸಂಕಲ್ಪ ತೊಡಲಿದ್ದಾರೆ. ವಿವೇಕ್ ಬ್ಯಾಂಡ್ ಕೈಯಲ್ಲಿ ಧರಿಸುವುದರೊಂದಿಗೆ ಆ ದಿನ ಆರಂಭವಾಗಲಿರುವ ಅಭಿಯಾನವು 26ಜನವರಿ 2015 ರ ವರೆಗೆ 2 ವಾರ ನಡೆಯಲಿರುವ ಈ ಬೃಹತ್ ಯುವ ಅಭಿಯಾನದಲ್ಲಿ ಸುಮಾರು 12 ಲಕ್ಷ ಯುವಕ- ಯುವತಿಯರು ಭಾಗವಹಿಸಲಿದ್ದಾರೆ. ಬೆಂಗಳೂರಿನ ಸಾಮಾಜಿಕ ಸಂಸ್ಥೆ ‘ಸಮರ್ಥ ಭಾರತ’ ಈ ಯುವ ಅಭಿಯಾನವನ್ನು ಆಯೋಜಿಸಿದೆ.

ಕಾಲೇಜು ವಿದ್ಯಾರ್ಥಿಗಳು, ಯುವ ಉದ್ಯೋಗಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ತಮ್ಮ ವೈಯಕ್ತಿಕ ಜೀವನದಲ್ಲಿ ಉತ್ತಮಗುಣಸ್ವಭಾವಗಳನ್ನು ಮೈಗೂಡಿಸುವುದರ ಜತೆಗೆ ಸಾಮಾಜಿಕವಾಗಿ ಉಪಯೋಗವಾಗುವ ಸೇವಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸುವುದು ಈ ಅಭಿಯಾನದ ಉದ್ದೇಶ . ಹೆಚ್ಚಿನ ಯುವ ಜನತೆಯನ್ನು ಸ್ಪೂರ್ತಿದಾಯಕ ಕಾರ್ಯಗಳಿಗೆ ಪ್ರೇರೇಪಿಸಿ ಈ ಮೂಲಕ ಅನೇಕ ಇತರರಿಗೆ ಆದರ್ಶ ವ್ಯಕ್ತಿಗಳಾಗುವ ಮೂಲಕ “ಉತ್ತಮನಾಗು-ಉಪಕಾರಿಯಾಗು” ಎಂಬ ಪರಂಪರೆಯನ್ನು ನಿರ್ಮಿಸುವ ಆಶಯವನ್ನು ಈ ಅಭಿಯಾನ ಹೊಂದಿದೆ.

ಈ ಸಂದೇಶವು ಹೆಚ್ಚಿನ ಯುವ ಜನತೆಗೆ ತಲುಪಲು ತಂತ್ರಜ್ಞಾನಾಧಾರಿತ ವೇದಿಕೆಗಳಾದ ಸಮರ್ಥ ಭಾರತ ವೆಬ್‌ಸೈಟ್, ಸಾಮಾಜಿಕ ಜಾಲತಾಣಗಳು , ವಾಟ್ಸಪ್, ಮತ್ತು ಎಸ್‌ಎಮ್‌ಎಸ್ ಗಳನ್ನು ಬಳಸುವ ಮೂಲಕ “ವಿವೇಕ್ ಬ್ಯಾಂಡ್” ಅಭಿಯಾನದ ಪ್ರಚಾರ ನಡೆಸಲಾಗುತ್ತಿದೆ. ಇದಲ್ಲದೇ ಈ ವೇದಿಕೆಗಳು ವಿವೇಕ್ ಬ್ಯಾಂಡ್ ಧರಿಸುವವರಿಗೆ ಸ್ಪೂರ್ತಿದಾಯಕ ಅನುಭವಗಳನ್ನು ಹಂಚಿಕೊಳ್ಳಲೂ ಲಭ್ಯವಿರುತ್ತದೆ.

ಅನೇಕ ಸಂಘ ಸಂಸ್ಥೆಗಳು, ವಿದ್ಯಾ ಸಂಸ್ಥೆಗಳು, ಸಾಂಸ್ಕೃತಿಕ ಸಂಘಗಳು,ಸಮಾಜದ ಅನೇಕ ಕ್ಷೇತ್ರಗಳಲ್ಲಿ ಹೆಸರಾಂತ ಗಣ್ಯರು ಈ ಅಭಿಯಾನಕ್ಕೆ ದನಿಗೂಡಿಸಿದ್ದಾರೆ .

ನಮ್ಮ ಅಭಿಯಾನದ ರಾಯಭಾರಿಗಳು :-
ಸ್ಮೃತಿ ಇರಾನಿ, ಕೇಂದ್ರ ಮಾನವ ಸಂಪನ್ಮೂಲ ಸಚಿವರು, ಭಾರತ ಸರಕಾರ ,ಡಾ. ಡಿ.ವೀರೇಂದ್ರ ಹೆಗ್ಗಡೆ, ಧರ್ಮಾಧಿಕಾರಿಗಳು ಧರ್ಮಸ್ಥಳ ದೇವಸ್ಥಾನ ,ಪೂಜ್ಯ ಶ್ರೀ ನಿರ್ಮಲನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಮಠ ,ಡಾ. ಅಣ್ಣಾದೊರೈ, ಇಸ್ರೋ ವಿಜ್ಞಾನಿಗಳು ಮತ್ತು ಮಂಗಳಯಾನ ಕಾರ್ಯಕ್ರಮದ ಮುಖ್ಯಸ್ಥರು ,ನ್ಯಾ.ಮೂ. (ನಿವೃತ್ತ ) ಶಿವರಾಜ ಪಾಟೀಲ್, ಹೆಸರಾಂತ ಕಾನೂನು ತಜ್ಞರು ,ಪದ್ಮಭೂಷಣ ಡಾ. ದೇವಿ ಶೆಟ್ಟಿ, ಹೃದಯ ತಜ್ಞರು ಮತ್ತು ಮುಖ್ಯಸ್ಥರು ನಾರಾಯಣ ಹೃದಯಾಲಯ ಸಂಸ್ಥೆ,ಶ್ರೀನಗರ ಕಿಟ್ಟಿ , ಕನ್ನಡ ಸಿನೆಮಾ ನಟರು,ಬಿ.ಸಿ. ಪಾಟೀಲ್, ಕನ್ನಡ ಸಿನೆಮಾ ನಟರು, ಮಮತಾ ಪೂಜಾರಿ, ಭಾರತೀಯ ಮಹಿಳಾ ಕಬ್ಬಡ್ಡಿ ತಂಡದ ನಾಯಕರು, ಪೂಜ್ಯ ಶ್ರೀ ಪ್ರಕಾಶಾನಂದ ಸ್ವಾಮೀಜಿ, ರಾಮಕೃಷ್ಣಾಶ್ರಮ ,ಡಾ. ಶರಣ್ ಪಾಟೀಲ್, ಮೂಳೆ ತಜ್ಞರು ಮತ್ತು ಮುಖ್ಯಸ್ಥರು ಸ್ಪರ್ಷ ಆಸ್ಪತ್ರೆಗಳ ಸಮೂಹ , ಚಕ್ರವರ್ತಿ ಸೂಲಿಬೆಲೆ, ಸಾಮಾಜಿಕ ಕಾರ್ಯಕರ್ತರು, ಅಂಕಣಕಾರ-ಭಾಷಣಕಾರರು ,ಮಿಥುನ್ ಅಭಿಮನ್ಯು, ಕ್ರಿಕೆಟ್ ಆಟಗಾರರು , ಗುರುಕಿರಣ್, ಸಂಗೀತ ನಿರ್ದೇಶಕರು ,ಡಾ. ಸಿ.ಎಸ್. ರಾವ್, ಅಧ್ಯಕ್ಷರು ರಿಲಾಯನ್ಸ ಕಮ್ಮ್ಯುನಿಕೇಶನ್ ,ಅರ್ಜುನ್ ದೇವಯ್ಯ, ಏಶಿಯನ್ ಗೇಮ್ಸ ಸ್ವರ್ಣ ಪದಕ ವಿಜೇತರು, ರೂಪಿಕಾ, ಕನ್ನಡ ಅಭಿನೇತ್ರಿ

ಜನವರಿ 05.2015 ರ ನಂತರ ರಾಜ್ಯದ ಅನೇಕ ಚಿಲ್ಲರೆ ಮಳಿಗೆಗಳಲ್ಲಿ ವಿವೇಕ ಬ್ಯಾಂಡ್ ಲಭ್ಯವಿರುತ್ತದೆ. ಎಲ್ಲಾ ಮಾರಾಟ ಮಳಿಗೆಗಳ ಸಮಗ್ರ ವಿವರಗಳು www.samarthabharata.org , www.vivekband.com ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9880621824, 9663330692 (ಬೆಂಗಳೂರು) , 9448111824 (ಹುಬ್ಬಳ್ಳಿ), ), 9739953063 (ಮಂಗಳೂರು) ಇಮೈಲ್ ವಿಳಾಸ: : reachout.sb@gmail.com

Write A Comment