ಉಡುಪಿ: ಹಣ ದುರುಪಯೋಗ ಸೇರಿದಂತೆ ಬೇರೆ ಬೇರೆ ಹಗರಣಗಳಲ್ಲಿ ಭಾಗಿಯಾದ ಆರೋಪದಲ್ಲಿ ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ ಅವರನ್ನು ಅಧ್ಯಕ್ಷ ಸ್ಥಾನದಿಂದ ಅಮಾನತು ಮಾಡಲಾಗಿದೆ ಅಲ್ಲದೇ ಇತರೇ ಒಂಬತ್ತು ಮಂದಿ ನಿರ್ದೇಶಕರನ್ನು ಕೂಡ ಅಮಾನತು ಮಾಡಿ ಆದೇಶವನ್ನು ನೀಡಿದ್ದಾರೆ.
ಕೋಟಿಗಟ್ಟಲೇ ಹಣ ದುರುಪಯೋಗ ಮಾಡಿದ ಹಗರಣಗಳ ಕುರಿತು ಜೆ.ಆರ್.ಸಿ. ಕೋರ್ಟಿನಲ್ಲಿ ತನಿಖೆ ನಡೆಯುತ್ತಿದ್ದು ಜ.6 ರಂದು ಈ ಅಮಾನತು ಆದೇಶ ಹೊರಡಿಸಲಾಗಿದೆ.
ಸದ್ಯ ಸುವರ್ಣ ಅವರ ಸ್ಥಾನಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿದ್ದು ಪ್ರವೀಣ್ ಬಿ. ನಾಯಕ್ ನೇಮಕವಾಗಿದ್ದಾರೆ. ಇನ್ನು ಅಮಾನತುಗೊಂಡಿರುವ ಅಧ್ಯಕ್ಷರು ಹಾಗೂ ನಿರ್ದೇಶಕರು ಆರು ವರ್ಷಗಳ ಕಾಲ ಸಹಕಾರಿ ಸಂಘದ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸುವ ಹಾಗಿಲ್ಲ.