ಮಂಗಳೂರು: ಮೂಡಬಿದ್ರೆಯ ಜನನಿಬಿಡ ಪ್ರದೇಶದಲ್ಲಿ ಆಕ್ಟೋಬರ್ 9ರಂದು ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹೂವಿನ ವ್ಯಾಪಾರಿ, ಬಜರಂಗದಳದ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.
ಹೈಕೋರ್ಟ್ನಿಂದ ಜಾಮೀನು ಪಡೆದ ಆರೋಪಿಗಳು ಗಂಟಾಲ್ಕಟ್ಟೆಯ ಬದ್ರುದ್ದೀನ್ ಮತ್ತು ಇಮ್ತಿಯಾಜ್.
2015 ರ ಅ.9 ರಂದು ಪ್ರಶಾಂತ್ ಪೂಜಾರಿಯನ್ನು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪೊಲೀಸರು 11 ಜನರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದರು.
ಇವರಲ್ಲಿ ಇಬ್ಬರು ಆರೋಪಿಗಳಾದ ಬದ್ರುದ್ದೀನ್ ಮತ್ತು ಇಮ್ತಿಯಾಜ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಇವರಿಗೆ ಜಾಮೀನು ನೀಡಿದೆ.