ರಾಷ್ಟ್ರೀಯ

ಯಾವುದೇ ಕಾರಣಕ್ಕೂ ಯಾರೂ ರಾಜಿನಾಮೆ ಕೊಡಲ್ಲ: ಮುಕ್ತಾರ್ ಅಬ್ಬಾಸ್ ನಖ್ವಿ

Pinterest LinkedIn Tumblr

mukನವದೆಹಲಿ, ಡಿ.21-ಯಾವುದೇ ಕಾರಣಕ್ಕೂ ಯಾವೊಬ್ಬ ಸಚಿವರು ರಾಜೀನಾಮೆ ಕೊಡುವುದಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಹಾಯಕ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಇಂದು ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದರು.

ಡೆಲ್ಲಿ ಡಿಸ್ಟಿಕ್ಟ್ ಕ್ರಿಕೆಟ್ ಅಸೋಸಿಯೇಷನ್ (ಡಿಸಿಸಿಎ) ನಲ್ಲಿ ಭಾರೀ ಅಕ್ರಮ ವ್ಯವಹಾರಗಳು ನಡೆದಿವೆ ಎಂಬ ಆರೋಪ ಎದುರಿಸುತ್ತಿರುವ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳ ಸದಸ್ಯರು ಒತ್ತಾಯಿಸಿ, ಸದನದಲ್ಲಿ ಗದ್ದಲ ಎಬ್ಬಿಸಿದ ಹಿನ್ನೆಲೆಯಲ್ಲಿ ಮುಕ್ತಾರ್ ಅಬ್ಬಾಸ್ ನಖ್ವಿ ಈ ಹೇಳಿಕೆ ನೀಡಿದರು.

ಅರುಣ್ ಜೇಟ್ಲಿ ರಾಜೀನಾಮೆಗೆ ಆಗ್ರಹಿಸಿ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಕಾಂಗ್ರೆಸ್ ಸೇರಿದಂತೆ ವಿವಿಧ ವಿಪಕ್ಷಗಳ ಸದಸ್ಯರು ಕೋಲಾಹಲ ಎಬ್ಬಿಸಿದ್ದರಿಂದ ಸದನ ಕಲಾಪವನ್ನು ಬೆಳಗ್ಗೆ ಕೆಲಕಾಲ ಮುಂದೂಡಲಾಯಿತು.

Write A Comment