ಬಲರಾಮ್ ಪುರ: ಬಸ್ ಮತ್ತು ಜೀಪ್ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಲರಾಮ್ುರ ಬಳಿ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿದೇಶಿ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತರು ತುಳಸಿಪುರದ ದೇವಿ ಪಠಾಣ್ ದೇವಾಲಯಕ್ಕೆ ಭೇಟಿ ನೀಡಿ ಜೀಪ್ನಲ್ಲಿ ಮರಳುತ್ತಿರುವಾಗ ಘಟನೆ ಸಂಭವಿಸಿದೆ. 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಬಸ್ನಲ್ಲಿರುವ ವಿದೇಶಿಗರಿಗೆ ಏನೂ ಆಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮೇಶ್ ಚಂದ್ರ ಶ್ರೀವಾಸ್ತವ್ ತಿಳಿಸಿದ್ದಾರೆ.